Advertisement
MIRROR FOCUS

ರೇಬಿಸ್ ನಿರ್ಮೂಲನೆಗೆ ಕರ್ನಾಟಕದ ಹೊಸ ಪ್ರಯತ್ನ | ವಿಶ್ವವಿದ್ಯಾಲಯದಿಂದ ಬೀದಿ ನಾಯಿಗಳಿಗೆ ಓರಲ್ ರೇಬಿಸ್ ಲಸಿಕೆ ಸಂಶೋಧನೆ

Share

ರೇಬಿಸ್ ರೋಗ ನಿರ್ಮೂಲನೆ ಹಾಗೂ ನಿಯಂತ್ರಣದತ್ತ ಕರ್ನಾಟಕವು ಹೊಸ ಸಂಶೋಧನಾ ಹೆಜ್ಜೆ ಇಟ್ಟಿದ್ದು, ಬೀದಿ ನಾಯಿಗಳಿಗೆ ನೀಡಬಹುದಾದ “ಓರಲ್ ರೇಬಿಸ್ ಲಸಿಕೆ” (Oral Vaccine) ಅಭಿವೃದ್ಧಿಪಡಿಸಲು ಅಧ್ಯಯನ ಆರಂಭಿಸಲಾಗಿದೆ.

ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಜೊತೆಗೂಡಿ ಈ ಮಹತ್ವದ ಸಂಶೋಧನೆ ನಡೆಸುತ್ತಿದೆ.  ಈ ಲಸಿಕೆಯನ್ನು ಬೀದಿ ನಾಯಿಗಳಿಗೆ ಮಾಂಸ ಅಥವಾ ಮೊಟ್ಟೆ ಮೂಲಕ ಆಹಾರ ರೂಪದಲ್ಲಿ ನೀಡುವ ಯೋಜನೆ ರೂಪಿಸಲಾಗಿದ್ದು, ಇದರಿಂದ ನಾಯಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ರೇಬಿಸ್ ನಿಯಂತ್ರಣಕ್ಕೆ ಮಹತ್ತರ ನೆರವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ತಿಳಿಸಿದ್ದಾರೆ.

ಈ ಸಂಶೋಧನಾ ಯೋಜನೆಗೆ ಹೈದ್ರಾಬಾದ್‌ನ ರಾಷ್ಟ್ರೀಯ ಪ್ರಾಣಿ ಜೈವಿಕ ತಂತ್ರಜ್ಞಾನ ಸಂಸ್ಥೆ, ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಮಾಹಿತಿ ಸಂಸ್ಥೆ, ರಾಷ್ಟ್ರೀಯ ಪ್ರಾಣಿ ಸಂಪನ್ಮೂಲ ಸೌಲಭ್ಯ – ICMR, ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆ ಸಹಕಾರ ನೀಡುತ್ತಿದೆ. ಈ ಓರಲ್ ಲಸಿಕೆ ಅಭಿವೃದ್ಧಿಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ “ಒನ್ ಹೆಲ್ತ್ ಮಿಷನ್” ಅಡಿಯಲ್ಲಿ ₹2.89 ಕೋಟಿ ರೂಪಾಯಿ ಅನುದಾನ ನೀಡಿದೆ. ಬೀದಿ ನಾಯಿಗಳಲ್ಲಿನ ರೇಬಿಸ್ ನಿಯಂತ್ರಣದ ಮೂಲಕ ಮಾನವರಿಗೂ ಸೋಂಕು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಹೀಗಾಗಿ ಈ ಓರಲ್ ವ್ಯಾಕ್ಸಿನ್ ಸಂಶೋಧನೆ ರೇಬಿಸ್ ನಿರ್ಮೂಲನೆಗೆ ದೊಡ್ಡ ಕೊಡುಗೆಯಾಗಬಹುದು ಎಂದು  ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

8 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

23 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago