Advertisement
MIRROR FOCUS

ರೇಬಿಸ್ ನಿರ್ಮೂಲನೆಗೆ ಕರ್ನಾಟಕದ ಹೊಸ ಪ್ರಯತ್ನ | ವಿಶ್ವವಿದ್ಯಾಲಯದಿಂದ ಬೀದಿ ನಾಯಿಗಳಿಗೆ ಓರಲ್ ರೇಬಿಸ್ ಲಸಿಕೆ ಸಂಶೋಧನೆ

Share

ರೇಬಿಸ್ ರೋಗ ನಿರ್ಮೂಲನೆ ಹಾಗೂ ನಿಯಂತ್ರಣದತ್ತ ಕರ್ನಾಟಕವು ಹೊಸ ಸಂಶೋಧನಾ ಹೆಜ್ಜೆ ಇಟ್ಟಿದ್ದು, ಬೀದಿ ನಾಯಿಗಳಿಗೆ ನೀಡಬಹುದಾದ “ಓರಲ್ ರೇಬಿಸ್ ಲಸಿಕೆ” (Oral Vaccine) ಅಭಿವೃದ್ಧಿಪಡಿಸಲು ಅಧ್ಯಯನ ಆರಂಭಿಸಲಾಗಿದೆ.

ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಜೊತೆಗೂಡಿ ಈ ಮಹತ್ವದ ಸಂಶೋಧನೆ ನಡೆಸುತ್ತಿದೆ.  ಈ ಲಸಿಕೆಯನ್ನು ಬೀದಿ ನಾಯಿಗಳಿಗೆ ಮಾಂಸ ಅಥವಾ ಮೊಟ್ಟೆ ಮೂಲಕ ಆಹಾರ ರೂಪದಲ್ಲಿ ನೀಡುವ ಯೋಜನೆ ರೂಪಿಸಲಾಗಿದ್ದು, ಇದರಿಂದ ನಾಯಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ರೇಬಿಸ್ ನಿಯಂತ್ರಣಕ್ಕೆ ಮಹತ್ತರ ನೆರವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ತಿಳಿಸಿದ್ದಾರೆ.

ಈ ಸಂಶೋಧನಾ ಯೋಜನೆಗೆ ಹೈದ್ರಾಬಾದ್‌ನ ರಾಷ್ಟ್ರೀಯ ಪ್ರಾಣಿ ಜೈವಿಕ ತಂತ್ರಜ್ಞಾನ ಸಂಸ್ಥೆ, ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಮಾಹಿತಿ ಸಂಸ್ಥೆ, ರಾಷ್ಟ್ರೀಯ ಪ್ರಾಣಿ ಸಂಪನ್ಮೂಲ ಸೌಲಭ್ಯ – ICMR, ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆ ಸಹಕಾರ ನೀಡುತ್ತಿದೆ. ಈ ಓರಲ್ ಲಸಿಕೆ ಅಭಿವೃದ್ಧಿಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ “ಒನ್ ಹೆಲ್ತ್ ಮಿಷನ್” ಅಡಿಯಲ್ಲಿ ₹2.89 ಕೋಟಿ ರೂಪಾಯಿ ಅನುದಾನ ನೀಡಿದೆ. ಬೀದಿ ನಾಯಿಗಳಲ್ಲಿನ ರೇಬಿಸ್ ನಿಯಂತ್ರಣದ ಮೂಲಕ ಮಾನವರಿಗೂ ಸೋಂಕು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಹೀಗಾಗಿ ಈ ಓರಲ್ ವ್ಯಾಕ್ಸಿನ್ ಸಂಶೋಧನೆ ರೇಬಿಸ್ ನಿರ್ಮೂಲನೆಗೆ ದೊಡ್ಡ ಕೊಡುಗೆಯಾಗಬಹುದು ಎಂದು  ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

8 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

12 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago