Advertisement
MIRROR FOCUS

ರೇಬಿಸ್ ನಿರ್ಮೂಲನೆಗೆ ಕರ್ನಾಟಕದ ಹೊಸ ಪ್ರಯತ್ನ | ವಿಶ್ವವಿದ್ಯಾಲಯದಿಂದ ಬೀದಿ ನಾಯಿಗಳಿಗೆ ಓರಲ್ ರೇಬಿಸ್ ಲಸಿಕೆ ಸಂಶೋಧನೆ

Share

ರೇಬಿಸ್ ರೋಗ ನಿರ್ಮೂಲನೆ ಹಾಗೂ ನಿಯಂತ್ರಣದತ್ತ ಕರ್ನಾಟಕವು ಹೊಸ ಸಂಶೋಧನಾ ಹೆಜ್ಜೆ ಇಟ್ಟಿದ್ದು, ಬೀದಿ ನಾಯಿಗಳಿಗೆ ನೀಡಬಹುದಾದ “ಓರಲ್ ರೇಬಿಸ್ ಲಸಿಕೆ” (Oral Vaccine) ಅಭಿವೃದ್ಧಿಪಡಿಸಲು ಅಧ್ಯಯನ ಆರಂಭಿಸಲಾಗಿದೆ.

ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಜೊತೆಗೂಡಿ ಈ ಮಹತ್ವದ ಸಂಶೋಧನೆ ನಡೆಸುತ್ತಿದೆ.  ಈ ಲಸಿಕೆಯನ್ನು ಬೀದಿ ನಾಯಿಗಳಿಗೆ ಮಾಂಸ ಅಥವಾ ಮೊಟ್ಟೆ ಮೂಲಕ ಆಹಾರ ರೂಪದಲ್ಲಿ ನೀಡುವ ಯೋಜನೆ ರೂಪಿಸಲಾಗಿದ್ದು, ಇದರಿಂದ ನಾಯಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ರೇಬಿಸ್ ನಿಯಂತ್ರಣಕ್ಕೆ ಮಹತ್ತರ ನೆರವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ ತಿಳಿಸಿದ್ದಾರೆ.

ಈ ಸಂಶೋಧನಾ ಯೋಜನೆಗೆ ಹೈದ್ರಾಬಾದ್‌ನ ರಾಷ್ಟ್ರೀಯ ಪ್ರಾಣಿ ಜೈವಿಕ ತಂತ್ರಜ್ಞಾನ ಸಂಸ್ಥೆ, ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಮಾಹಿತಿ ಸಂಸ್ಥೆ, ರಾಷ್ಟ್ರೀಯ ಪ್ರಾಣಿ ಸಂಪನ್ಮೂಲ ಸೌಲಭ್ಯ – ICMR, ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆ ಸಹಕಾರ ನೀಡುತ್ತಿದೆ. ಈ ಓರಲ್ ಲಸಿಕೆ ಅಭಿವೃದ್ಧಿಗಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಷ್ಟ್ರೀಯ “ಒನ್ ಹೆಲ್ತ್ ಮಿಷನ್” ಅಡಿಯಲ್ಲಿ ₹2.89 ಕೋಟಿ ರೂಪಾಯಿ ಅನುದಾನ ನೀಡಿದೆ. ಬೀದಿ ನಾಯಿಗಳಲ್ಲಿನ ರೇಬಿಸ್ ನಿಯಂತ್ರಣದ ಮೂಲಕ ಮಾನವರಿಗೂ ಸೋಂಕು ಹರಡುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಹೀಗಾಗಿ ಈ ಓರಲ್ ವ್ಯಾಕ್ಸಿನ್ ಸಂಶೋಧನೆ ರೇಬಿಸ್ ನಿರ್ಮೂಲನೆಗೆ ದೊಡ್ಡ ಕೊಡುಗೆಯಾಗಬಹುದು ಎಂದು  ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

6 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago