ಚುನಾವಣೆ ನೀತಿಸಂಹಿತೆ ಜಾರಿ | ಎಲ್ಲೆಲ್ಲೂ ಮತದಾರರ ಓಲೈಕೆಗಾಗಿ ಉಡುಗೊರೆ ವಿತರಣೆ | ಮಕ್ಕಳ ಬಳಕೆ..!

April 3, 2023
2:13 PM

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ಮದ್ಯ, ನಗದು, ಉಡುಗೊರೆ ಮತ್ತು ಇತರೆ ವಸ್ತುಗಳನ್ನು ನೀಡಲು ರಾಜಕೀಯ ಪಕ್ಷಗಳು ನವೀನ ಮಾರ್ಗಗಳನ್ನು ಕಂಡು ಕೊಂಡಿದ್ದು, ಆಹಾರ ವಿತರಕ ಸಂಸ್ಥೆ, ಮಕ್ಕಳ ಬಳಕೆ ಮಾಡಿಕೊಳ್ಳುತ್ತಿವೆ ಎಂದು ವರದಿಯಾಗಿದೆ.

ಚುನಾವಣೆ ಹಿನ್ನೆಲೆ ಅಕ್ರಮ ಚಟುವಟಿಕೆಗಳ ತಡೆಯಲು ಚುನಾವಣಾ ಆಯೋಗ ಈಗಾಗಲೇ ಎಲ್ಲೆಡೆ ಬಿಗಿ ಭದ್ರತೆಗಳನ್ನು ನಿಯೋಜಿಸಿದ್ದು, ವಾಹನಗಳ ತಪಾಸಣೆಗೆ ಎಲ್ಲೆಡೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿದ್ದಾರೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಶಾಲಾ ಮಕ್ಕಳನ್ನು ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲು, ತಮ್ಮ ಪರವಾಗಿ ಮತ ಚಲಾಯಿಸುವಂತೆ ಮಕ್ಕಳ ಮೂಲಕ ಜನರಿಗೆ ಉಡುಗೊರೆ ಹಾಗೂ ಹಣವನ್ನು ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮೈಸೂರು ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿಯೂ ಇಂತಹ ಬೆಳವಣಿಗೆಗಳು ಕಂಡು ಬಂದಿದ್ದು.

ಈ ಚುನಾವಣೆಯಲ್ಲಿ ಪ್ರತೀ ಕುಟುಂಬಕ್ಕೆ ರೂ.500 ನೀಡುವಂತೆ 10 ವರ್ಷದೊಳಗಿನ ಮಕ್ಕಳಿಗೆ ಸೂಚಿಸಲಾಗಿತ್ತು. ಪೊಲೀಸರು‌ ಹಾಗೂ ಅಧಿಕಾರಗಳ ಕೈಗೆ ಮಕ್ಕಳು ಸಿಕ್ಕಿಬೀಳದ ಪರಿಣಾಮ ಈ ಕಾರ್ಯ ಮಾಡಿದ ಮಕ್ಕಳಿದೆ ಕೈತುಂಬ ಹಣವನ್ನು ನೀಡಲಾಗಿತ್ತು. ಇದೇ ಪ್ರಯತ್ನವನ್ನು ರಾಜಕೀಯ ಪಕ್ಷಗಳು ಮತ್ತೊಮ್ಮೆ ಪ್ರಯೋಗಿಸಲು ಮುಂದಾಗಿದ್ದಾರೆಂದು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಮಂಡ್ಯ, ಚಾಮರಾಜನಗರ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗದ ರಾಜಕಾರಣಿಗಳು ಶಾಲಾ ಮಕ್ಕಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದಾರೆಂದು ಹೇಳಿದ್ದಾರೆ.

ಚುನಾವಣಾ ಅಧಿಕಾರಿಗಳು ಸಾಮಾನ್ಯವಾಗಿ ಆಹಾರ ವಿತರಣಾ ಕಾರ್ಯನಿರ್ವಾಹಕರ ಮೇಲೆ ನಿಗಾ ಇಡದ ಕಾರಣ ಮತದಾರರಿಗೆ ಉಡುಗೊರೆಗಳು ಮತ್ತು ಹಣವನ್ನು ತಲುಪಿಸಲು ಫುಡ್ ಡೆಲಿವರಿ ಸಂಸ್ಥೆಗಳು, ಡೆಲಿವರಿ ಅಪ್ಲಿಕೇಶನ್‌ಗಳು, ಪಿಕ್-ಅಪ್ ಮತ್ತು ಡ್ರಾಪ್ ಸೇವಾ ಪೂರೈಕೆದಾರರನ್ನೂ ಬಳಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ ಅವರು ಪ್ರತಿಕ್ರಿಯೆ ನೀಡಿ, ಚುನಾವಣಾ ಪ್ರಚಾರ ಕಾರ್ಯಗಳಿಗೆ ಮಕ್ಕಳ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ
June 22, 2026
7:20 AM
by: ದ ರೂರಲ್ ಮಿರರ್.ಕಾಂ
ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ
June 21, 2026
10:16 PM
by: ದ ರೂರಲ್ ಮಿರರ್.ಕಾಂ
ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?
June 21, 2026
8:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror