ಸುದ್ದಿಗಳು

ಚುನಾವಣೆ ನೀತಿಸಂಹಿತೆ ಜಾರಿ | ಎಲ್ಲೆಲ್ಲೂ ಮತದಾರರ ಓಲೈಕೆಗಾಗಿ ಉಡುಗೊರೆ ವಿತರಣೆ | ಮಕ್ಕಳ ಬಳಕೆ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ಮದ್ಯ, ನಗದು, ಉಡುಗೊರೆ ಮತ್ತು ಇತರೆ ವಸ್ತುಗಳನ್ನು ನೀಡಲು ರಾಜಕೀಯ ಪಕ್ಷಗಳು ನವೀನ ಮಾರ್ಗಗಳನ್ನು ಕಂಡು ಕೊಂಡಿದ್ದು, ಆಹಾರ ವಿತರಕ ಸಂಸ್ಥೆ, ಮಕ್ಕಳ ಬಳಕೆ ಮಾಡಿಕೊಳ್ಳುತ್ತಿವೆ ಎಂದು ವರದಿಯಾಗಿದೆ.

Advertisement
Advertisement

ಚುನಾವಣೆ ಹಿನ್ನೆಲೆ ಅಕ್ರಮ ಚಟುವಟಿಕೆಗಳ ತಡೆಯಲು ಚುನಾವಣಾ ಆಯೋಗ ಈಗಾಗಲೇ ಎಲ್ಲೆಡೆ ಬಿಗಿ ಭದ್ರತೆಗಳನ್ನು ನಿಯೋಜಿಸಿದ್ದು, ವಾಹನಗಳ ತಪಾಸಣೆಗೆ ಎಲ್ಲೆಡೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿದ್ದಾರೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಶಾಲಾ ಮಕ್ಕಳನ್ನು ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲು, ತಮ್ಮ ಪರವಾಗಿ ಮತ ಚಲಾಯಿಸುವಂತೆ ಮಕ್ಕಳ ಮೂಲಕ ಜನರಿಗೆ ಉಡುಗೊರೆ ಹಾಗೂ ಹಣವನ್ನು ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮೈಸೂರು ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿಯೂ ಇಂತಹ ಬೆಳವಣಿಗೆಗಳು ಕಂಡು ಬಂದಿದ್ದು.

ಈ ಚುನಾವಣೆಯಲ್ಲಿ ಪ್ರತೀ ಕುಟುಂಬಕ್ಕೆ ರೂ.500 ನೀಡುವಂತೆ 10 ವರ್ಷದೊಳಗಿನ ಮಕ್ಕಳಿಗೆ ಸೂಚಿಸಲಾಗಿತ್ತು. ಪೊಲೀಸರು‌ ಹಾಗೂ ಅಧಿಕಾರಗಳ ಕೈಗೆ ಮಕ್ಕಳು ಸಿಕ್ಕಿಬೀಳದ ಪರಿಣಾಮ ಈ ಕಾರ್ಯ ಮಾಡಿದ ಮಕ್ಕಳಿದೆ ಕೈತುಂಬ ಹಣವನ್ನು ನೀಡಲಾಗಿತ್ತು. ಇದೇ ಪ್ರಯತ್ನವನ್ನು ರಾಜಕೀಯ ಪಕ್ಷಗಳು ಮತ್ತೊಮ್ಮೆ ಪ್ರಯೋಗಿಸಲು ಮುಂದಾಗಿದ್ದಾರೆಂದು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಮಂಡ್ಯ, ಚಾಮರಾಜನಗರ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗದ ರಾಜಕಾರಣಿಗಳು ಶಾಲಾ ಮಕ್ಕಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದಾರೆಂದು ಹೇಳಿದ್ದಾರೆ.

Advertisement

ಚುನಾವಣಾ ಅಧಿಕಾರಿಗಳು ಸಾಮಾನ್ಯವಾಗಿ ಆಹಾರ ವಿತರಣಾ ಕಾರ್ಯನಿರ್ವಾಹಕರ ಮೇಲೆ ನಿಗಾ ಇಡದ ಕಾರಣ ಮತದಾರರಿಗೆ ಉಡುಗೊರೆಗಳು ಮತ್ತು ಹಣವನ್ನು ತಲುಪಿಸಲು ಫುಡ್ ಡೆಲಿವರಿ ಸಂಸ್ಥೆಗಳು, ಡೆಲಿವರಿ ಅಪ್ಲಿಕೇಶನ್‌ಗಳು, ಪಿಕ್-ಅಪ್ ಮತ್ತು ಡ್ರಾಪ್ ಸೇವಾ ಪೂರೈಕೆದಾರರನ್ನೂ ಬಳಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ ಅವರು ಪ್ರತಿಕ್ರಿಯೆ ನೀಡಿ, ಚುನಾವಣಾ ಪ್ರಚಾರ ಕಾರ್ಯಗಳಿಗೆ ಮಕ್ಕಳ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

13 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago