Advertisement
ಸುದ್ದಿಗಳು

ಚುನಾವಣೆ ನೀತಿಸಂಹಿತೆ ಜಾರಿ | ಎಲ್ಲೆಲ್ಲೂ ಮತದಾರರ ಓಲೈಕೆಗಾಗಿ ಉಡುಗೊರೆ ವಿತರಣೆ | ಮಕ್ಕಳ ಬಳಕೆ..!

Share

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ಮದ್ಯ, ನಗದು, ಉಡುಗೊರೆ ಮತ್ತು ಇತರೆ ವಸ್ತುಗಳನ್ನು ನೀಡಲು ರಾಜಕೀಯ ಪಕ್ಷಗಳು ನವೀನ ಮಾರ್ಗಗಳನ್ನು ಕಂಡು ಕೊಂಡಿದ್ದು, ಆಹಾರ ವಿತರಕ ಸಂಸ್ಥೆ, ಮಕ್ಕಳ ಬಳಕೆ ಮಾಡಿಕೊಳ್ಳುತ್ತಿವೆ ಎಂದು ವರದಿಯಾಗಿದೆ.

Advertisement
Advertisement
Advertisement
Advertisement

ಚುನಾವಣೆ ಹಿನ್ನೆಲೆ ಅಕ್ರಮ ಚಟುವಟಿಕೆಗಳ ತಡೆಯಲು ಚುನಾವಣಾ ಆಯೋಗ ಈಗಾಗಲೇ ಎಲ್ಲೆಡೆ ಬಿಗಿ ಭದ್ರತೆಗಳನ್ನು ನಿಯೋಜಿಸಿದ್ದು, ವಾಹನಗಳ ತಪಾಸಣೆಗೆ ಎಲ್ಲೆಡೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆಗೊಳಿಸಿದ್ದಾರೆ.

Advertisement

ಬೇಸಿಗೆ ರಜೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಶಾಲಾ ಮಕ್ಕಳನ್ನು ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳಲು, ತಮ್ಮ ಪರವಾಗಿ ಮತ ಚಲಾಯಿಸುವಂತೆ ಮಕ್ಕಳ ಮೂಲಕ ಜನರಿಗೆ ಉಡುಗೊರೆ ಹಾಗೂ ಹಣವನ್ನು ವಿತರಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮೈಸೂರು ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿಯೂ ಇಂತಹ ಬೆಳವಣಿಗೆಗಳು ಕಂಡು ಬಂದಿದ್ದು.

ಈ ಚುನಾವಣೆಯಲ್ಲಿ ಪ್ರತೀ ಕುಟುಂಬಕ್ಕೆ ರೂ.500 ನೀಡುವಂತೆ 10 ವರ್ಷದೊಳಗಿನ ಮಕ್ಕಳಿಗೆ ಸೂಚಿಸಲಾಗಿತ್ತು. ಪೊಲೀಸರು‌ ಹಾಗೂ ಅಧಿಕಾರಗಳ ಕೈಗೆ ಮಕ್ಕಳು ಸಿಕ್ಕಿಬೀಳದ ಪರಿಣಾಮ ಈ ಕಾರ್ಯ ಮಾಡಿದ ಮಕ್ಕಳಿದೆ ಕೈತುಂಬ ಹಣವನ್ನು ನೀಡಲಾಗಿತ್ತು. ಇದೇ ಪ್ರಯತ್ನವನ್ನು ರಾಜಕೀಯ ಪಕ್ಷಗಳು ಮತ್ತೊಮ್ಮೆ ಪ್ರಯೋಗಿಸಲು ಮುಂದಾಗಿದ್ದಾರೆಂದು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದಾರೆ.

Advertisement

ಮಂಡ್ಯ, ಚಾಮರಾಜನಗರ ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗದ ರಾಜಕಾರಣಿಗಳು ಶಾಲಾ ಮಕ್ಕಳನ್ನು ಚುನಾವಣಾ ಕರ್ತವ್ಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದಾರೆಂದು ಹೇಳಿದ್ದಾರೆ.

ಚುನಾವಣಾ ಅಧಿಕಾರಿಗಳು ಸಾಮಾನ್ಯವಾಗಿ ಆಹಾರ ವಿತರಣಾ ಕಾರ್ಯನಿರ್ವಾಹಕರ ಮೇಲೆ ನಿಗಾ ಇಡದ ಕಾರಣ ಮತದಾರರಿಗೆ ಉಡುಗೊರೆಗಳು ಮತ್ತು ಹಣವನ್ನು ತಲುಪಿಸಲು ಫುಡ್ ಡೆಲಿವರಿ ಸಂಸ್ಥೆಗಳು, ಡೆಲಿವರಿ ಅಪ್ಲಿಕೇಶನ್‌ಗಳು, ಪಿಕ್-ಅಪ್ ಮತ್ತು ಡ್ರಾಪ್ ಸೇವಾ ಪೂರೈಕೆದಾರರನ್ನೂ ಬಳಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

Advertisement

ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ ಅವರು ಪ್ರತಿಕ್ರಿಯೆ ನೀಡಿ, ಚುನಾವಣಾ ಪ್ರಚಾರ ಕಾರ್ಯಗಳಿಗೆ ಮಕ್ಕಳ ಬಳಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

6 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

6 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

6 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

6 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

7 hours ago

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…

8 hours ago