08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ಪೂರ್ವ ಮುಂಗಾರು ಚಟುವಟಿಕೆಗಳು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಭಾಗ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಇವತ್ತು ಮುಂಜಾನೆ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿ ಕರಾವಳಿಯ ವಿವಿಧ ಭಾಗಗಳಲ್ಲಿ ಸಾಮಾನ್ಯದಿಂದ ಮಧ್ಯಮ ಪ್ರಮಾಣದ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಪ್ರಸ್ತುತ ಹವಾಮಾನ ಸ್ಥಿತಿಯಂತೆ ಮುಂದಿನ 10 ದಿನಗಳವರೆಗೆ ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿವೆ.
ಮಲೆನಾಡು ಭಾಗ: ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಪ್ರದೇಶಗಳಲ್ಲಿ ಈಗಾಗಲೇ ತೇವಾಂಶ ಹೆಚ್ಚಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿಯೂ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ.
ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ಒತ್ತಡ ಹೆಚ್ಚಾದರೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಇವತ್ತು ಹಾಗೂ ನಾಳೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದಾದರೂ ನಂತರ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.
ದಕ್ಷಿಣ ಒಳನಾಡು: ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮುಂದಿನ 2 ರಿಂದ 3 ದಿನಗಳವರೆಗೆ ಈ ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುವ ಸಾಧ್ಯತೆಯಿರುವ ವಾಯುಭಾರ ಕುಸಿತದ ವ್ಯವಸ್ಥೆ ಮುಂದೆ ಸಾಗುತ್ತಿದ್ದು, ಈಗಿನ ಲಕ್ಷಣಗಳ ಪ್ರಕಾರ ಮೇ 11ರಂದು ಉತ್ತರ ಸುಮಾತ್ರ ಕರಾವಳಿಯ ಬಳಿ ತಿರುಗುವಿಕೆಯ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತ ಸ್ಪಷ್ಟವಾಗಿ ಉಂಟಾದ ನಂತರವೇ ಅದರ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹವಾಮಾನದಲ್ಲಿ ಹೇಗೆ ಕಾಣಿಸಿಕೊಳ್ಳುತ್ತದೆ ಎಂಬುದು ಸ್ಪಷ್ಟವಾಗಲಿದೆ.
Pre-monsoon activity has intensified across Karnataka with thunderstorm and rain forecasts for coastal, Malnad, and interior districts. Coastal Karnataka is expected to receive continued pre-monsoon showers for the next 10 days, while several interior districts may witness evening and night thunderstorms over the next few days.
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…
ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…