ದ್ವಿದಳ ಧಾನ್ಯ (ಬೇಳೆ) ಮಿಷನ್ ಅಡಿ ಕರ್ನಾಟಕಕ್ಕೆ ₹191 ಕೋಟಿ 67 ಲಕ್ಷ ಅನುದಾನ ಮಂಜೂರಾದ ನೆರವು ಪತ್ರವನ್ನು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಹಸ್ತಾಂತರಿಸಿದರು.
ಅವರು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ ಮತ್ತು ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ ಮಾತನಾಡಿ, ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ 35 ಬೇಳೆ ಸಂಸ್ಕರಣಾ ಗಿರಣಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು. ಪ್ರತಿ ಗಿರಣಿಗೆ ₹25 ಲಕ್ಷ ಸಹಾಯಧನ, ತಾಂತ್ರಿಕ ಸಹಯೋಗದ ಭರವಸೆ, ಎಕರೆವಾರು ಉತ್ಪಾದಕತೆ ಹೆಚ್ಚಿಸಲು ಕ್ರಮದ ಬಗ್ಗೆ ಮಾತನಾಡಿದರು. ರಾಜ್ಯದಲ್ಲಿ 25 ಬೀಜ ಗ್ರಾಮಗಳ ಸ್ಥಾಪನೆಗೆ ಸೂಚನೆ, ಮಾದರಿ ಪ್ರದರ್ಶನಕ್ಕೆ ರೈತರಿಗೆ ₹10,000 ಪ್ರೋತ್ಸಾಹಧನ, ಉತ್ತಮ ಇಳುವರಿಗಾಗಿ ಉತ್ತಮ ಬೀಜ ಬಳಕೆ ಮೇಲೆ ಒತ್ತು ನೀಡುವ ಯೋಜನೆಯನ್ನು ಪ್ರಸ್ತಾಪಿಸಿದರು. ಪ್ರಧಾನಮಂತ್ರಿಯವರ ನಿರ್ದೇಶನದ ಮೇರೆಗೆ ತೆಂಗು ಅಭಿವೃದ್ಧಿ ಕಾರ್ಯಕ್ರಮ ಆರಂಭಿಸಲಾಗುವುದು. ರೋಗಪೀಡಿತ ಹಳೆಯ ಮರಗಳನ್ನು ಬದಲಿಸಲು ಉತ್ತೇಜನ ನೀಡಲಾಗುವುದು ಎಂದು ಸಚಿವರು ಹೇಳಿದರು.
ರೈತರ ನೆರವಿನಿಂದ ಭಾರತ ವಿಶ್ವದಲ್ಲೇ ಅಗ್ರಮಾನ್ಯ ಭತ್ತ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ಸಚಿವರು ಹೇಳಿದರು. ನೀರಿನ ಮಿತಬಳಕೆ ಮತ್ತು ಕಡಿಮೆ ಶ್ರಮದಲ್ಲಿ ಹೆಚ್ಚಿನ ಇಳುವರಿ ನೀಡುವ ಅಕ್ಕಿತಳಿಗಳ ಬಳಕೆಗಾಗಿ ವಿಜ್ಞಾನಿಗಳ ಸಂಶೋಧನೆ ಮುಂದುವರಿದಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕಾಫಿ, ಕೊಕ್ಕೊ, ಫಲಪುಷ್ಪ, ತರಕಾರಿ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ. ಕರ್ನಾಟಕದ ಸಿರಿಧಾನ್ಯ ಬ್ರ್ಯಾಂಡ್ಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಗೊಳಿಸಲು ಸಹ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.ಇದಲ್ಲದೇ ರಾಜ್ಯಕ್ಕೆ ನೀಡಬೇಕಿರುವ ₹154 ಕೋಟಿ ಅನುದಾನವನ್ನೂ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಘೋಷಿಸಿದರು.
ಇದನ್ನೂ ಓದಿ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…