Advertisement
MIRROR FOCUS

ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ

Share

ದ್ವಿದಳ ಧಾನ್ಯ (ಬೇಳೆ) ಮಿಷನ್ ಅಡಿ ಕರ್ನಾಟಕಕ್ಕೆ ₹191 ಕೋಟಿ 67 ಲಕ್ಷ ಅನುದಾನ ಮಂಜೂರಾದ ನೆರವು ಪತ್ರವನ್ನು ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು  ರಾಜ್ಯದ ಕೃಷಿ ಸಚಿವರಾದ ಎನ್‌ ಚಲುವರಾಯಸ್ವಾಮಿ ಅವರಿಗೆ ಹಸ್ತಾಂತರಿಸಿದರು.

ಅವರು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ ಮತ್ತು ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ ಮಾತನಾಡಿ, ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ 35 ಬೇಳೆ ಸಂಸ್ಕರಣಾ ಗಿರಣಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು. ಪ್ರತಿ ಗಿರಣಿಗೆ ₹25 ಲಕ್ಷ ಸಹಾಯಧನ, ತಾಂತ್ರಿಕ ಸಹಯೋಗದ ಭರವಸೆ, ಎಕರೆವಾರು ಉತ್ಪಾದಕತೆ ಹೆಚ್ಚಿಸಲು ಕ್ರಮದ ಬಗ್ಗೆ ಮಾತನಾಡಿದರು.  ರಾಜ್ಯದಲ್ಲಿ 25 ಬೀಜ ಗ್ರಾಮಗಳ ಸ್ಥಾಪನೆಗೆ ಸೂಚನೆ, ಮಾದರಿ ಪ್ರದರ್ಶನಕ್ಕೆ ರೈತರಿಗೆ ₹10,000 ಪ್ರೋತ್ಸಾಹಧನ, ಉತ್ತಮ ಇಳುವರಿಗಾಗಿ ಉತ್ತಮ ಬೀಜ ಬಳಕೆ ಮೇಲೆ ಒತ್ತು ನೀಡುವ ಯೋಜನೆಯನ್ನು ಪ್ರಸ್ತಾಪಿಸಿದರು.  ಪ್ರಧಾನಮಂತ್ರಿಯವರ ನಿರ್ದೇಶನದ ಮೇರೆಗೆ ತೆಂಗು ಅಭಿವೃದ್ಧಿ ಕಾರ್ಯಕ್ರಮ ಆರಂಭಿಸಲಾಗುವುದು. ರೋಗಪೀಡಿತ ಹಳೆಯ ಮರಗಳನ್ನು ಬದಲಿಸಲು ಉತ್ತೇಜನ ನೀಡಲಾಗುವುದು ಎಂದು ಸಚಿವರು ಹೇಳಿದರು.

Advertisement

ರೈತರ ನೆರವಿನಿಂದ ಭಾರತ ವಿಶ್ವದಲ್ಲೇ ಅಗ್ರಮಾನ್ಯ ಭತ್ತ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ಸಚಿವರು ಹೇಳಿದರು. ನೀರಿನ ಮಿತಬಳಕೆ ಮತ್ತು ಕಡಿಮೆ ಶ್ರಮದಲ್ಲಿ ಹೆಚ್ಚಿನ ಇಳುವರಿ ನೀಡುವ ಅಕ್ಕಿತಳಿಗಳ ಬಳಕೆಗಾಗಿ ವಿಜ್ಞಾನಿಗಳ ಸಂಶೋಧನೆ ಮುಂದುವರಿದಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾಫಿ, ಕೊಕ್ಕೊ, ಫಲಪುಷ್ಪ, ತರಕಾರಿ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ. ಕರ್ನಾಟಕದ ಸಿರಿಧಾನ್ಯ ಬ್ರ್ಯಾಂಡ್‌ಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಗೊಳಿಸಲು ಸಹ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.ಇದಲ್ಲದೇ ರಾಜ್ಯಕ್ಕೆ ನೀಡಬೇಕಿರುವ ₹154 ಕೋಟಿ ಅನುದಾನವನ್ನೂ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಘೋಷಿಸಿದರು.

Advertisement

ಇದನ್ನೂ ಓದಿ…

ಗಡಿಯಲ್ಲೇ ಗಡಿ ಮೀರಿ ಭ್ರಷ್ಟಾಚಾರ ! ಅಡಿಕೆ ಕಳ್ಳಸಾಗಾಟಕ್ಕೆ ಲಂಚ…!?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

59 minutes ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago