Advertisement
MIRROR FOCUS

ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ

Share

ದ್ವಿದಳ ಧಾನ್ಯ (ಬೇಳೆ) ಮಿಷನ್ ಅಡಿ ಕರ್ನಾಟಕಕ್ಕೆ ₹191 ಕೋಟಿ 67 ಲಕ್ಷ ಅನುದಾನ ಮಂಜೂರಾದ ನೆರವು ಪತ್ರವನ್ನು ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು  ರಾಜ್ಯದ ಕೃಷಿ ಸಚಿವರಾದ ಎನ್‌ ಚಲುವರಾಯಸ್ವಾಮಿ ಅವರಿಗೆ ಹಸ್ತಾಂತರಿಸಿದರು.

ಅವರು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ ಮತ್ತು ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ ಮಾತನಾಡಿ, ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ 35 ಬೇಳೆ ಸಂಸ್ಕರಣಾ ಗಿರಣಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು. ಪ್ರತಿ ಗಿರಣಿಗೆ ₹25 ಲಕ್ಷ ಸಹಾಯಧನ, ತಾಂತ್ರಿಕ ಸಹಯೋಗದ ಭರವಸೆ, ಎಕರೆವಾರು ಉತ್ಪಾದಕತೆ ಹೆಚ್ಚಿಸಲು ಕ್ರಮದ ಬಗ್ಗೆ ಮಾತನಾಡಿದರು.  ರಾಜ್ಯದಲ್ಲಿ 25 ಬೀಜ ಗ್ರಾಮಗಳ ಸ್ಥಾಪನೆಗೆ ಸೂಚನೆ, ಮಾದರಿ ಪ್ರದರ್ಶನಕ್ಕೆ ರೈತರಿಗೆ ₹10,000 ಪ್ರೋತ್ಸಾಹಧನ, ಉತ್ತಮ ಇಳುವರಿಗಾಗಿ ಉತ್ತಮ ಬೀಜ ಬಳಕೆ ಮೇಲೆ ಒತ್ತು ನೀಡುವ ಯೋಜನೆಯನ್ನು ಪ್ರಸ್ತಾಪಿಸಿದರು.  ಪ್ರಧಾನಮಂತ್ರಿಯವರ ನಿರ್ದೇಶನದ ಮೇರೆಗೆ ತೆಂಗು ಅಭಿವೃದ್ಧಿ ಕಾರ್ಯಕ್ರಮ ಆರಂಭಿಸಲಾಗುವುದು. ರೋಗಪೀಡಿತ ಹಳೆಯ ಮರಗಳನ್ನು ಬದಲಿಸಲು ಉತ್ತೇಜನ ನೀಡಲಾಗುವುದು ಎಂದು ಸಚಿವರು ಹೇಳಿದರು.

ರೈತರ ನೆರವಿನಿಂದ ಭಾರತ ವಿಶ್ವದಲ್ಲೇ ಅಗ್ರಮಾನ್ಯ ಭತ್ತ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ಸಚಿವರು ಹೇಳಿದರು. ನೀರಿನ ಮಿತಬಳಕೆ ಮತ್ತು ಕಡಿಮೆ ಶ್ರಮದಲ್ಲಿ ಹೆಚ್ಚಿನ ಇಳುವರಿ ನೀಡುವ ಅಕ್ಕಿತಳಿಗಳ ಬಳಕೆಗಾಗಿ ವಿಜ್ಞಾನಿಗಳ ಸಂಶೋಧನೆ ಮುಂದುವರಿದಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾಫಿ, ಕೊಕ್ಕೊ, ಫಲಪುಷ್ಪ, ತರಕಾರಿ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ. ಕರ್ನಾಟಕದ ಸಿರಿಧಾನ್ಯ ಬ್ರ್ಯಾಂಡ್‌ಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಗೊಳಿಸಲು ಸಹ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.ಇದಲ್ಲದೇ ರಾಜ್ಯಕ್ಕೆ ನೀಡಬೇಕಿರುವ ₹154 ಕೋಟಿ ಅನುದಾನವನ್ನೂ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಘೋಷಿಸಿದರು.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

9 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

16 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago