Advertisement
MIRROR FOCUS

ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ

Share

ದ್ವಿದಳ ಧಾನ್ಯ (ಬೇಳೆ) ಮಿಷನ್ ಅಡಿ ಕರ್ನಾಟಕಕ್ಕೆ ₹191 ಕೋಟಿ 67 ಲಕ್ಷ ಅನುದಾನ ಮಂಜೂರಾದ ನೆರವು ಪತ್ರವನ್ನು ಕೇಂದ್ರ ಕೃಷಿ ಸಚಿವರಾದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು  ರಾಜ್ಯದ ಕೃಷಿ ಸಚಿವರಾದ ಎನ್‌ ಚಲುವರಾಯಸ್ವಾಮಿ ಅವರಿಗೆ ಹಸ್ತಾಂತರಿಸಿದರು.

ಅವರು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ – ಉತ್ಪಾದನೋತ್ತರ ಕೃಷಿ ಮತ್ತು ರೈತರ ಸಬಲೀಕರಣ ಕಾರ್ಯಕ್ರಮದಲ್ಲಿ ಮಾತನಾಡಿ, ತೊಗರಿಬೇಳೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ 35 ಬೇಳೆ ಸಂಸ್ಕರಣಾ ಗಿರಣಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು. ಪ್ರತಿ ಗಿರಣಿಗೆ ₹25 ಲಕ್ಷ ಸಹಾಯಧನ, ತಾಂತ್ರಿಕ ಸಹಯೋಗದ ಭರವಸೆ, ಎಕರೆವಾರು ಉತ್ಪಾದಕತೆ ಹೆಚ್ಚಿಸಲು ಕ್ರಮದ ಬಗ್ಗೆ ಮಾತನಾಡಿದರು.  ರಾಜ್ಯದಲ್ಲಿ 25 ಬೀಜ ಗ್ರಾಮಗಳ ಸ್ಥಾಪನೆಗೆ ಸೂಚನೆ, ಮಾದರಿ ಪ್ರದರ್ಶನಕ್ಕೆ ರೈತರಿಗೆ ₹10,000 ಪ್ರೋತ್ಸಾಹಧನ, ಉತ್ತಮ ಇಳುವರಿಗಾಗಿ ಉತ್ತಮ ಬೀಜ ಬಳಕೆ ಮೇಲೆ ಒತ್ತು ನೀಡುವ ಯೋಜನೆಯನ್ನು ಪ್ರಸ್ತಾಪಿಸಿದರು.  ಪ್ರಧಾನಮಂತ್ರಿಯವರ ನಿರ್ದೇಶನದ ಮೇರೆಗೆ ತೆಂಗು ಅಭಿವೃದ್ಧಿ ಕಾರ್ಯಕ್ರಮ ಆರಂಭಿಸಲಾಗುವುದು. ರೋಗಪೀಡಿತ ಹಳೆಯ ಮರಗಳನ್ನು ಬದಲಿಸಲು ಉತ್ತೇಜನ ನೀಡಲಾಗುವುದು ಎಂದು ಸಚಿವರು ಹೇಳಿದರು.

ರೈತರ ನೆರವಿನಿಂದ ಭಾರತ ವಿಶ್ವದಲ್ಲೇ ಅಗ್ರಮಾನ್ಯ ಭತ್ತ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ಸಚಿವರು ಹೇಳಿದರು. ನೀರಿನ ಮಿತಬಳಕೆ ಮತ್ತು ಕಡಿಮೆ ಶ್ರಮದಲ್ಲಿ ಹೆಚ್ಚಿನ ಇಳುವರಿ ನೀಡುವ ಅಕ್ಕಿತಳಿಗಳ ಬಳಕೆಗಾಗಿ ವಿಜ್ಞಾನಿಗಳ ಸಂಶೋಧನೆ ಮುಂದುವರಿದಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾಫಿ, ಕೊಕ್ಕೊ, ಫಲಪುಷ್ಪ, ತರಕಾರಿ ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ. ಕರ್ನಾಟಕದ ಸಿರಿಧಾನ್ಯ ಬ್ರ್ಯಾಂಡ್‌ಗಳನ್ನು ದೇಶ-ವಿದೇಶಗಳಲ್ಲಿ ಪ್ರಚುರಗೊಳಿಸಲು ಸಹ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ತಿಳಿಸಿದರು.ಇದಲ್ಲದೇ ರಾಜ್ಯಕ್ಕೆ ನೀಡಬೇಕಿರುವ ₹154 ಕೋಟಿ ಅನುದಾನವನ್ನೂ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಘೋಷಿಸಿದರು.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

9 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago