ವೆದರ್ ಮಿರರ್

ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ….! | ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.

Advertisement
Advertisement

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ.

ಉಳಿದಂತೆ ವಾಯುವ್ಯ ಭಾರತ ಭಾಗಳಲ್ಲಿ ಮಾರ್ಚ್​ 23ರ ಸಂಜೆಯಿಂದಲೇ ವಾತಾವರಣದಲ್ಲಿ ಬದಲಾವಣೆ ಆಗಿದ್ದು, ಗುಡುಗು ಮಳೆ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 24-26 ರಿಂದ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು/ಆಲಿಕಲ್ಲು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಯುಗಾದಿಗೂ ಮುನ್ನ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಗದಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಅದರಲ್ಲೂ ಮಳೆಯೊಂದಿಗೆ ಆಲಿಕಲ್ಲು ಸುರಿದ ಪರಿಣಾಮ ಬೆಳೆದು ನಿಂತಿದ್ದ ಬೆಳೆ ಕೈ ಸೇರುವ ಮುನ್ನ ನಾಶವಾಗಿ ರೈತರು ಕಣ್ಣೀರಿಡುವ ಸ್ಥಿತಿ ಎದುರಾಗಿತ್ತು.

ಮಾವು, ಬಾಳೆ, ಟೊಮೆಟೊ, ಮೆಣಸಿನಕಾಯಿ, ದ್ರಾಕ್ಷಿ ಸೇರಿದಂತೆ ಹಲವು ತರಕಾರಿ ಹಾಗೂ ವಾಣಿಜ್ಯ ಬೆಳೆಗಳು ನೆಲಕಚ್ಚಿದ್ದವು. ಇದರೊಂದಿಗೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವಂತೆ ಆಗ್ರಹಿಸಿದ್ದರು.

Advertisement

ಹವಾಮಾನದಲ್ಲಿ ಉಂಟಾಗುತ್ತಿರುವ ತೀವ್ರ ಬದಲಾವಣೆಯಿಂದ ಈ ವರ್ಷದ ಆರಂಭದ ಪೂರ್ವ ಮುಂಗಾರು ಚಟುವಟಿಕೆಗಳು ಬೇಗ ಪ್ರಾರಂಭವಾಗುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

9 minutes ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

25 minutes ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

43 minutes ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

8 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

13 hours ago