ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಅನ್ವಯ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗದೆ.
ಉಳಿದಂತೆ ವಾಯುವ್ಯ ಭಾರತ ಭಾಗಳಲ್ಲಿ ಮಾರ್ಚ್ 23ರ ಸಂಜೆಯಿಂದಲೇ ವಾತಾವರಣದಲ್ಲಿ ಬದಲಾವಣೆ ಆಗಿದ್ದು, ಗುಡುಗು ಮಳೆ ಪ್ರಾರಂಭವಾಗುವ ನಿರೀಕ್ಷೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 24-26 ರಿಂದ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢದಲ್ಲಿ ಗುಡುಗು/ಆಲಿಕಲ್ಲು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಯುಗಾದಿಗೂ ಮುನ್ನ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಗದಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುರಿದ ಮಳೆ ರೈತರಿಗೆ ಭಾರೀ ನಷ್ಟವನ್ನು ಉಂಟು ಮಾಡಿತ್ತು. ಅದರಲ್ಲೂ ಮಳೆಯೊಂದಿಗೆ ಆಲಿಕಲ್ಲು ಸುರಿದ ಪರಿಣಾಮ ಬೆಳೆದು ನಿಂತಿದ್ದ ಬೆಳೆ ಕೈ ಸೇರುವ ಮುನ್ನ ನಾಶವಾಗಿ ರೈತರು ಕಣ್ಣೀರಿಡುವ ಸ್ಥಿತಿ ಎದುರಾಗಿತ್ತು.
ಮಾವು, ಬಾಳೆ, ಟೊಮೆಟೊ, ಮೆಣಸಿನಕಾಯಿ, ದ್ರಾಕ್ಷಿ ಸೇರಿದಂತೆ ಹಲವು ತರಕಾರಿ ಹಾಗೂ ವಾಣಿಜ್ಯ ಬೆಳೆಗಳು ನೆಲಕಚ್ಚಿದ್ದವು. ಇದರೊಂದಿಗೆ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವಂತೆ ಆಗ್ರಹಿಸಿದ್ದರು.
ಹವಾಮಾನದಲ್ಲಿ ಉಂಟಾಗುತ್ತಿರುವ ತೀವ್ರ ಬದಲಾವಣೆಯಿಂದ ಈ ವರ್ಷದ ಆರಂಭದ ಪೂರ್ವ ಮುಂಗಾರು ಚಟುವಟಿಕೆಗಳು ಬೇಗ ಪ್ರಾರಂಭವಾಗುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…