ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

August 3, 2026
4:38 PM
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್‌ 3 ರಂದು ಆರೆಂಜ್ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಆಗಸ್ಟ್‌ 3ರಿಂದ 6ರವರೆಗೆ ಎಲ್ಲೋ ಅಲರ್ಟ್‌ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್‌ 3 ರಿಂದ ಮುಂದಿನ ಕೆಲ ದಿನಗಳವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್‌ ಹಾಗೂ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್‌ 3 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ (64.5 ಮಿ.ಮೀ.–115.4 ಮಿ.ಮೀ.)ರಿಂದ ಹಾಗೂ (115.5 ಮಿ.ಮೀ.–204.4 ಮಿ.ಮೀ.) ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಜಾರಿಯಲ್ಲಿದೆ.

ಇದರ ಜೊತೆಗೆ ಆಗಸ್ಟ್‌ 3 ರಂದು ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು,  ಆಗಸ್ಟ್‌ 4 ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಹಾಗೂ  ಆಗಸ್ಟ್‌ 5 ಮತ್ತು 6: ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5 ಮಿ.ಮೀ.ದಿಂದ 115.4 ಮಿ.ಮೀ.ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆ, ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಆತಂಕ, ನದಿ-ಹೊಳೆಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಹಾಗೂ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ IMD ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The India Meteorological Department (IMD) has issued an Orange Alert for Dakshina Kannada on August 3, forecasting heavy to very heavy rainfall. A Yellow Alert has also been issued for Belagavi, Uttara Kannada, Udupi, Kodagu, Shivamogga and Chikkamagaluru on different dates between August 3 and 6 due to the likelihood of heavy rainfall.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror