ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

April 9, 2026
1:23 PM
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ರಾಜ್ಯದಲ್ಲಿ ಮತ್ತೆ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ವಾತಾವರಣದಲ್ಲಿ ಉಂಟಾದ ಗಾಳಿಯ ದಿಕ್ಕು ಬದಲಾವಣೆಯಿಂದಾಗಿ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಕರಾವಳಿ ಭಾಗ : ಕರಾವಳಿ ಭಾಗದಲ್ಲಿ ಗಾಳಿಯ ಚಲನವಲನದಲ್ಲಿ ಬದಲಾವಣೆ ಕಂಡುಬಂದಿದ್ದು, ಅರಬ್ಬಿ ಸಮುದ್ರದಿಂದ ಪೂರ್ವಕ್ಕೆ ಹಾಗೂ ಬಂಗಾಳ ಕೊಲ್ಲಿಯಿಂದ ಪಶ್ಚಿಮಕ್ಕೆ ಗಾಳಿ ಚಲನೆ ಆರಂಭವಾಗಿದೆ.  ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ.  ಇಂದಿನಿಂದ ಕರಾವಳಿಯಲ್ಲಿ ಮಳೆಯ ಆರಂಭದ ಲಕ್ಷಣಗಳು ಸ್ಪಷ್ಟವಾಗಿವೆ.

ಮಲೆನಾಡು ಭಾಗ : ಕೊಡಗು ಜಿಲ್ಲೆಯಲ್ಲೂ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದಲ್ಲಿ ಭಾಗಶಃ ಮೋಡ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಬಾಳೆಹೊನ್ನೂರು ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡು : ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇನ್ನೂ ಒಣಹವೆ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ.

ದಕ್ಷಿಣ ಒಳನಾಡು : ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ಇತರೆ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಒಟ್ಟು ಸ್ಥಿತಿ ಏನು? :  ರಾಜ್ಯದಲ್ಲಿ ಇಂದಿನಿಂದ ಮಳೆಯ ವಾತಾವರಣ ಮತ್ತೆ ಆರಂಭ. ಪ್ರತಿದಿನ ಮಳೆ ಇರದೇ ಇದ್ದರೂ ಮುಂದಿನ ದಿನಗಳಲ್ಲಿ ಮಳೆಯ ನಿರೀಕ್ಷೆ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ
May 20, 2026
2:50 PM
by: ಸಾಯಿಶೇಖರ್ ಕರಿಕಳ
ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ
May 20, 2026
7:18 AM
by: ಮಿರರ್‌ ಡೆಸ್ಕ್
ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ
May 20, 2026
7:15 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror