ಕರ್ನಾಟಕ ರಾಜ್ಯದಲ್ಲಿ ಬೇಸಿಗೆ ತಾಪಮಾನ ಮುಂದುವರಿದಿದ್ದರೂ, ಕೆಲವು ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ನಿಧಾನವಾಗಿ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.
ಕರಾವಳಿ ಭಾಗದಲ್ಲಿ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದಿನಪೂರ್ತಿ ಬಿಸಿಲಿನ ಜೊತೆಗೆ ಸಂಜೆ ವೇಳೆಗೆ ಮೋಡದ ವಾತಾವರಣ ಇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಸೋಮೇಶ್ವರ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ ಮತ್ತು ಧಾರವಾಡ ಗಡಿಭಾಗಗಳಲ್ಲೂ ಸಂಜೆ ವೇಳೆಗೆ ಚದುರಿದ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಸೂಚನೆಗಳ ಪ್ರಕಾರ, ಏಪ್ರಿಲ್ 26ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.
ಮಲೆನಾಡು ಭಾಗದಲ್ಲಿ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಮುಂದುವರಿಯಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲೂ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರಬಹುದು. ಪ್ರಸ್ತುತ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಏಪ್ರಿಲ್ 28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆಗಳು ಕಂಡುಬರುತ್ತಿವೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ರಾತ್ರಿ ವೇಳೆ ಮೋಡದ ವಾತಾವರಣ ಇರಲಿದೆ. ಈ ಭಾಗದಲ್ಲೂ ಏಪ್ರಿಲ್ 28ರಿಂದ ಮಳೆ ಪ್ರಾರಂಭವಾಗುವ ಸಾಧ್ಯತೆಗಳು ಇದ್ದು, ಮುಂದಿನ ದಿನಗಳಲ್ಲಿ ಮಳೆಯ ಚಟುವಟಿಕೆ ಚುರುಕುಗೊಳ್ಳುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Karnataka is expected to witness a gradual return of rainfall activity from April 26 in coastal and Malnad regions, with thunder showers in parts of Dakshina Kannada, Udupi, and nearby areas. Rainfall is likely to increase further across interior regions, especially from April 28, while most areas will continue to experience heat with cloudy conditions.


