ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

April 24, 2026
2:18 PM
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಕ್ರಮೇಣ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗ ಮೋಡ ಹಾಗೂ ಹೆಚ್ಚಿದ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.  ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ವಿಶೇಷವಾಗಿ ಘಟ್ಟದ ಕೆಳಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ – ಆದರೆ ಪ್ರಮಾಣ ಹೆಚ್ಚು ಇರುವುದಿಲ್ಲ. ಉತ್ತರ ಕನ್ನಡದಲ್ಲೂ ಕೆಲವೆಡೆ ಸಂಜೆ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಕಾಸರಗೋಡು ಸೇರಿ ಕರಾವಳಿಯಲ್ಲಿ ವ್ಯಾಪಕ ಮಳೆಯ ಆರಂಭದ ಸೂಚನೆ ಇದೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರುತ್ತದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವ ಕಾರಣ ಸಂಜೆ ವೇಳೆ ಗುಡುಗು ಸಹಿತ ಚಿಕ್ಕಮಟ್ಟದ ಮಳೆಯ ಸಾಧ್ಯತೆ ಇದೆ (ಪ್ರಮಾಣ ಕಡಿಮೆ). ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗುವ ಲಕ್ಷಣ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿ ಪ್ರಭಾವ ಹೆಚ್ಚಾದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳದಲ್ಲೂ ಮಳೆಯಾಗಬಹುದು. ಏಪ್ರಿಲ್ 27–28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರದಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು.
ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರಂಭದ ಸೂಚನೆ.

ಉತ್ತರ ಆಂಧ್ರ ಮತ್ತು ತೆಲಂಗಾಣ ಭಾಗಗಳಲ್ಲಿ ತಾಪಮಾನ ಹೆಚ್ಚಿರುವುದು ಉತ್ತರ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಆಂಧ್ರ ಹಾಗೂ ತಮಿಳುನಾಡಿನ ಬಿಸಿ ಪರಿಣಾಮದಿಂದ  ಏಪ್ರಿಲ್ 26 ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

Karnataka is likely to witness a shift in weather conditions with rain expected to begin from April 25–26 across Malnad, Coastal, and Interior regions. While current rainfall chances remain low, thunderstorm activity will gradually increase, bringing relief from rising temperatures.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror