Advertisement
ಸುದ್ದಿಗಳು

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

Share

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗ ಮೋಡ ಹಾಗೂ ಹೆಚ್ಚಿದ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.  ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ವಿಶೇಷವಾಗಿ ಘಟ್ಟದ ಕೆಳಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ – ಆದರೆ ಪ್ರಮಾಣ ಹೆಚ್ಚು ಇರುವುದಿಲ್ಲ. ಉತ್ತರ ಕನ್ನಡದಲ್ಲೂ ಕೆಲವೆಡೆ ಸಂಜೆ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಕಾಸರಗೋಡು ಸೇರಿ ಕರಾವಳಿಯಲ್ಲಿ ವ್ಯಾಪಕ ಮಳೆಯ ಆರಂಭದ ಸೂಚನೆ ಇದೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರುತ್ತದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವ ಕಾರಣ ಸಂಜೆ ವೇಳೆ ಗುಡುಗು ಸಹಿತ ಚಿಕ್ಕಮಟ್ಟದ ಮಳೆಯ ಸಾಧ್ಯತೆ ಇದೆ (ಪ್ರಮಾಣ ಕಡಿಮೆ). ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗುವ ಲಕ್ಷಣ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿ ಪ್ರಭಾವ ಹೆಚ್ಚಾದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳದಲ್ಲೂ ಮಳೆಯಾಗಬಹುದು. ಏಪ್ರಿಲ್ 27–28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರದಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು.
ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರಂಭದ ಸೂಚನೆ.

ಉತ್ತರ ಆಂಧ್ರ ಮತ್ತು ತೆಲಂಗಾಣ ಭಾಗಗಳಲ್ಲಿ ತಾಪಮಾನ ಹೆಚ್ಚಿರುವುದು ಉತ್ತರ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಆಂಧ್ರ ಹಾಗೂ ತಮಿಳುನಾಡಿನ ಬಿಸಿ ಪರಿಣಾಮದಿಂದ  ಏಪ್ರಿಲ್ 26 ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

Karnataka is likely to witness a shift in weather conditions with rain expected to begin from April 25–26 across Malnad, Coastal, and Interior regions. While current rainfall chances remain low, thunderstorm activity will gradually increase, bringing relief from rising temperatures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

4 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago