Advertisement
ಸುದ್ದಿಗಳು

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

Share

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗ ಮೋಡ ಹಾಗೂ ಹೆಚ್ಚಿದ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.  ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ವಿಶೇಷವಾಗಿ ಘಟ್ಟದ ಕೆಳಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ – ಆದರೆ ಪ್ರಮಾಣ ಹೆಚ್ಚು ಇರುವುದಿಲ್ಲ. ಉತ್ತರ ಕನ್ನಡದಲ್ಲೂ ಕೆಲವೆಡೆ ಸಂಜೆ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಕಾಸರಗೋಡು ಸೇರಿ ಕರಾವಳಿಯಲ್ಲಿ ವ್ಯಾಪಕ ಮಳೆಯ ಆರಂಭದ ಸೂಚನೆ ಇದೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರುತ್ತದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವ ಕಾರಣ ಸಂಜೆ ವೇಳೆ ಗುಡುಗು ಸಹಿತ ಚಿಕ್ಕಮಟ್ಟದ ಮಳೆಯ ಸಾಧ್ಯತೆ ಇದೆ (ಪ್ರಮಾಣ ಕಡಿಮೆ). ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗುವ ಲಕ್ಷಣ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿ ಪ್ರಭಾವ ಹೆಚ್ಚಾದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳದಲ್ಲೂ ಮಳೆಯಾಗಬಹುದು. ಏಪ್ರಿಲ್ 27–28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರದಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು.
ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರಂಭದ ಸೂಚನೆ.

ಉತ್ತರ ಆಂಧ್ರ ಮತ್ತು ತೆಲಂಗಾಣ ಭಾಗಗಳಲ್ಲಿ ತಾಪಮಾನ ಹೆಚ್ಚಿರುವುದು ಉತ್ತರ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಆಂಧ್ರ ಹಾಗೂ ತಮಿಳುನಾಡಿನ ಬಿಸಿ ಪರಿಣಾಮದಿಂದ  ಏಪ್ರಿಲ್ 26 ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

Karnataka is likely to witness a shift in weather conditions with rain expected to begin from April 25–26 across Malnad, Coastal, and Interior regions. While current rainfall chances remain low, thunderstorm activity will gradually increase, bringing relief from rising temperatures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

11 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago