Advertisement
ಸುದ್ದಿಗಳು

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

Share

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗ ಮೋಡ ಹಾಗೂ ಹೆಚ್ಚಿದ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.  ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ವಿಶೇಷವಾಗಿ ಘಟ್ಟದ ಕೆಳಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ – ಆದರೆ ಪ್ರಮಾಣ ಹೆಚ್ಚು ಇರುವುದಿಲ್ಲ. ಉತ್ತರ ಕನ್ನಡದಲ್ಲೂ ಕೆಲವೆಡೆ ಸಂಜೆ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಕಾಸರಗೋಡು ಸೇರಿ ಕರಾವಳಿಯಲ್ಲಿ ವ್ಯಾಪಕ ಮಳೆಯ ಆರಂಭದ ಸೂಚನೆ ಇದೆ.

Advertisement

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರುತ್ತದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವ ಕಾರಣ ಸಂಜೆ ವೇಳೆ ಗುಡುಗು ಸಹಿತ ಚಿಕ್ಕಮಟ್ಟದ ಮಳೆಯ ಸಾಧ್ಯತೆ ಇದೆ (ಪ್ರಮಾಣ ಕಡಿಮೆ). ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗುವ ಲಕ್ಷಣ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿ ಪ್ರಭಾವ ಹೆಚ್ಚಾದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳದಲ್ಲೂ ಮಳೆಯಾಗಬಹುದು. ಏಪ್ರಿಲ್ 27–28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರದಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು.
ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರಂಭದ ಸೂಚನೆ.

ಉತ್ತರ ಆಂಧ್ರ ಮತ್ತು ತೆಲಂಗಾಣ ಭಾಗಗಳಲ್ಲಿ ತಾಪಮಾನ ಹೆಚ್ಚಿರುವುದು ಉತ್ತರ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಆಂಧ್ರ ಹಾಗೂ ತಮಿಳುನಾಡಿನ ಬಿಸಿ ಪರಿಣಾಮದಿಂದ  ಏಪ್ರಿಲ್ 26 ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

Karnataka is likely to witness a shift in weather conditions with rain expected to begin from April 25–26 across Malnad, Coastal, and Interior regions. While current rainfall chances remain low, thunderstorm activity will gradually increase, bringing relief from rising temperatures.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

7 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

7 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

23 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

24 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

24 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

1 day ago