Advertisement
ಸುದ್ದಿಗಳು

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

Share

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗ ಮೋಡ ಹಾಗೂ ಹೆಚ್ಚಿದ ತಾಪಮಾನದಿಂದ ಕೂಡಿದ ವಾತಾವರಣ ಮುಂದುವರಿಯಲಿದೆ.  ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ವಿಶೇಷವಾಗಿ ಘಟ್ಟದ ಕೆಳಭಾಗಗಳಲ್ಲಿ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ – ಆದರೆ ಪ್ರಮಾಣ ಹೆಚ್ಚು ಇರುವುದಿಲ್ಲ. ಉತ್ತರ ಕನ್ನಡದಲ್ಲೂ ಕೆಲವೆಡೆ ಸಂಜೆ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ಕಾಸರಗೋಡು ಸೇರಿ ಕರಾವಳಿಯಲ್ಲಿ ವ್ಯಾಪಕ ಮಳೆಯ ಆರಂಭದ ಸೂಚನೆ ಇದೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಮೋಡದ ವಾತಾವರಣ ಇರುತ್ತದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿರುವ ಕಾರಣ ಸಂಜೆ ವೇಳೆ ಗುಡುಗು ಸಹಿತ ಚಿಕ್ಕಮಟ್ಟದ ಮಳೆಯ ಸಾಧ್ಯತೆ ಇದೆ (ಪ್ರಮಾಣ ಕಡಿಮೆ). ಏಪ್ರಿಲ್ 25ರಿಂದ ಮಲೆನಾಡಿನಲ್ಲಿ ಮಳೆ ಚುರುಕಾಗುವ ಲಕ್ಷಣ.

ಉತ್ತರ ಒಳನಾಡು:  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಭಾಗಗಳಲ್ಲಿ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಗಾಳಿ ಪ್ರಭಾವ ಹೆಚ್ಚಾದರೆ ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳದಲ್ಲೂ ಮಳೆಯಾಗಬಹುದು. ಏಪ್ರಿಲ್ 27–28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರದಲ್ಲಿ ಮೋಡದ ಪ್ರಮಾಣ ಸ್ವಲ್ಪ ಹೆಚ್ಚಾಗಬಹುದು.
ದಾವಣಗೆರೆ, ಚಿತ್ರದುರ್ಗ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ/ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಏಪ್ರಿಲ್ 26ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರಂಭದ ಸೂಚನೆ.

ಉತ್ತರ ಆಂಧ್ರ ಮತ್ತು ತೆಲಂಗಾಣ ಭಾಗಗಳಲ್ಲಿ ತಾಪಮಾನ ಹೆಚ್ಚಿರುವುದು ಉತ್ತರ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ. ಇದೇ ರೀತಿಯಾಗಿ ದಕ್ಷಿಣ ಆಂಧ್ರ ಹಾಗೂ ತಮಿಳುನಾಡಿನ ಬಿಸಿ ಪರಿಣಾಮದಿಂದ  ಏಪ್ರಿಲ್ 26 ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಚಟುವಟಿಕೆ ಹೆಚ್ಚಾಗಲಿದೆ.

Karnataka is likely to witness a shift in weather conditions with rain expected to begin from April 25–26 across Malnad, Coastal, and Interior regions. While current rainfall chances remain low, thunderstorm activity will gradually increase, bringing relief from rising temperatures.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

3 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

13 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

19 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago