29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆ ಇದೀಗ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸೂಚನೆಗಳು ಸ್ಪಷ್ಟವಾಗುತ್ತಿವೆ. ಏ. 29ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳು ಕಾಣಿಸುತ್ತಿವೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಹೆಚ್ಚಿನ ತೇವಾಂಶದಿಂದ ಉಷ್ಣತೆ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಹೊತ್ತಿನಲ್ಲಿ ಮೋಡದ ವಾತಾವರಣ ಇದ್ದು, ಸಂಜೆ ವೇಳೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಹಾಗೂ ಉತ್ತರ ಕನ್ನಡದ ಬೆಳಗಾವಿ, ಧಾರವಾಡಕ್ಕೆ ಹೊಂದಿಕೊಂಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಂಭವವಿದೆ.
ಗಾಳಿಯ ಒತ್ತಡ ಹಾಗೂ ಅಧಿಕ ತಾಪಮಾನದಿಂದ ಕರಾವಳಿಯ ಉಳಿದ ಪ್ರದೇಶಗಳಲ್ಲೂ ಮಳೆಯ ಸಾಧ್ಯತೆ ಇದೆ. ವಿಶೇಷವಾಗಿ ಏ. 29ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
ಕೊಡಗು ಜಿಲ್ಲೆಯ ಕೆಲ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಗಡಿಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಎ.29ರಿಂದ ಮಲೆನಾಡು ಪ್ರದೇಶಗಳಲ್ಲಿ ಮಳೆ ಹೆಚ್ಚು ಆಗುವ ಲಕ್ಷಣಗಳು ಗೋಚರಿಸುತ್ತಿವೆ.
ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದಲ್ಲಿ ಮಾತ್ರ ಮಳೆಯ ಸಾಧ್ಯತೆ ಇದೆ. ಈ ಭಾಗದಲ್ಲಿ ಮಳೆಯ ಚಟುವಟಿಕೆ ಮುಂದುವರಿಯುವ ಸೂಚನೆಗಳಿವೆ.
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಧಿಕ ತಾಪಮಾನ ಮುಂದುವರಿಯಲಿದೆ. ಆದರೆ ಏಪ್ರಿಲ್ 29ರಿಂದ ಇಲ್ಲಿ ಸಹ ಗುಡುಗು ಸಹಿತ ಮಳೆಯ ಆರಂಭವಾಗುವ ಸಾಧ್ಯತೆ ಇದೆ.
Karnataka is expected to witness increased rainfall activity starting April 29. Coastal and Malnad regions may receive thunder showers, while interior regions will gradually see rainfall after continued heat. Weather conditions indicate a shift due to rising temperature and pressure changes.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…