Advertisement
ಸುದ್ದಿಗಳು

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

Share

ರಾಜ್ಯದ ವಿವಿಧ ಭಾಗಗಳಲ್ಲಿ  ಮಳೆಯಾಗಿದ್ದು, ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಕರಾವಳಿ ಕರ್ನಾಟಕದ ಹಲವೆಡೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ. ಹೊನ್ನಾವರನಲ್ಲಿ 6 ಸೆಂ.ಮೀ, ಸುಳ್ಯದಲ್ಲಿ 4 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳ್ತಂಗಡಿ, ಕೊಟ್ಟಿಗೆಹಾರ, ಕೃಷ್ಣರಾಜಸಾಗರ, ಕುಂದಾಪುರ ಹಾಗೂ ಮಂಗಳೂರುಗಳಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ, ಬ್ರಹ್ಮಾವರ, ಧರ್ಮಸ್ಥಳ, ಹೊನ್ನಾಳಿ, ಜಯಪುರ ಸೇರಿದಂತೆ ಹಲವು ಕಡೆಗಳಲ್ಲಿ 2 ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆ ವರದಿ ಹೇಳಿದೆ.

ತಾಪಮಾನ ವಿವರ :  ಕಲಬುರಗಿನಲ್ಲಿ ಗರಿಷ್ಠ 38.4°C ತಾಪಮಾನ ದಾಖಲಾಗಿದ್ದು, ದಾವಣಗೆರೆಯಲ್ಲಿ ಕನಿಷ್ಠ 17°C ತಾಪಮಾನ ದಾಖಲಾಗಿದೆ. ಕರಾವಳಿಯ ಕೆಲವೆಡೆ ಗರಿಷ್ಠ ತಾಪಮಾನದಲ್ಲಿ 1 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರು ಹವಾಮಾನ (ಮುಂದಿನ 24 ಗಂಟೆ) : ಬೆಂಗಳೂರು ಮತ್ತು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಹಗುರ ಮಳೆ ಸಾಧ್ಯತೆ  ಗರಿಷ್ಠ ತಾಪಮಾನ: 35°C – ಕನಿಷ್ಠ ತಾಪಮಾನ: 21°C  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Several parts of Karnataka received rainfall today, especially in coastal and Malnad regions. Bengaluru is expected to witness light rain in the next 24 hours, mainly during evening or night. While some districts will continue to receive rain, others may experience dry weather.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

2 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

12 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago