ಮುಂಗಾರು ಮಳೆ ಪ್ರವೇಶಕ್ಕೆ ಇನ್ನು ನಾಲ್ಕು ದಿನ ಬಾಕಿ ಇರುವಾಗಲೇ ಮಳೆಯ ಆರ್ಭಟ ಬಹುತೇಕ ಜಿಲ್ಲೆಗಳಲ್ಲಿ ಆರಂಭವಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…