ಮುಂಗಾರು ಮಳೆ ಪ್ರವೇಶಕ್ಕೆ ಇನ್ನು ನಾಲ್ಕು ದಿನ ಬಾಕಿ ಇರುವಾಗಲೇ ಮಳೆಯ ಆರ್ಭಟ ಬಹುತೇಕ ಜಿಲ್ಲೆಗಳಲ್ಲಿ ಆರಂಭವಾಗಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.ಬಾಳೆಹೊನ್ನೂರು, ಕಣಬರ್ಗಿ, ಸವಣೂರು, ಶ್ರೀಮಂಗಲ, ಗೋಣಿಕೊಪ್ಪಲು, ಹಾವೇರಿ, ಬೆಳಗಾವಿ ನಗರ, ಪೊನ್ನಂಪೇಟೆ, ಮೂಡಿಗೆರೆಯಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…