Advertisement
ವೆದರ್ ಮಿರರ್

ಚಂಡಮಾರುತ ಎಫೆಕ್ಟ್ : ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ

Share

ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಹುಣಸೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಹಾಸನ, ಕುಣಿಗಲ್, ಕೆಐಎಎಲ್​, ಖಜೂರಿ, ತಿರುಮಲ, ಚಾಮರಾಜನಗರ, ಕೃಷ್ಣರಾಜಪೇಟೆ, ಬೀದರ್, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೋಚಾ ಚಂಡಮಾರುತದ ಸೃಷ್ಟಿ ಮತ್ತು ನಂತರ ಅದರ ಪ್ರಭಾವ ತೀವ್ರಗೊಂಡಿದ್ದು, ವ್ಯಾಪಕವಾದ ಗುಡುಗು ಸಹಿತ ಮಳೆಗೆ ಕಾರಣವಾಗಲಿದೆ. ಮತದಾನ ಸಾಮಗ್ರಿಗಳೊಂದಿಗೆ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಸಾಗಣೆ ಮತ್ತು ಚಲನೆಯ ಮೇಲೆ ಪರಿಣಾಮ ಬೀರಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹವಾಮಾನ ತಜ್ಞರ ಪ್ರಕಾರ, ಆಗ್ನೇಯ ಬಂಗಾಳದಲ್ಲಿ ಶೀಘ್ರದಲ್ಲೇ ಚಂಡಮಾರುತದ ಪರಿಚಲನೆ ರಚನೆಯಾಗುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಮೇ 7ರ ಸುಮಾರಿಗೆ ಇದೇ ಪ್ರದೇಶದಲ್ಲಿ ಅಪಾರ ಮಳೆಯಾಗುವ ಸಾಧ್ಯತೆ ಇದೆ. ಇದು ಮೇ 8 ರ ಸುಮಾರಿಗೆ ಇದು ಇನ್ನಷ್ಟು ಬಲಗೊಳ್ಳಲಿದೆ.

ಏಜೆನ್ಸಿ ಪ್ರಕಾರ, ತಾಪಮಾನ ಏರಿಕೆಯ ಹೊರತಾಗಿಯೂ, ಮುಂದಿನ ವಾರದವರೆಗೆ ಈ ರಾಜ್ಯಗಳಲ್ಲಿ ಶಾಖದ ಅಲೆಯು ಕಡಿಮೆ ಇರಲಿದೆ. ಮೇ ತಿಂಗಳ ಎರಡನೇ ವಾರದಿಂದ ಹವಾಮಾನವು ಸಂಪೂರ್ಣವಾಗಿ ಬದಲಾಗುತ್ತದೆ. ಜನರು ಆಗಾಗ ಬಿಸಿಲಿನ ತಾಪವನ್ನು ಎದುರಿಸಬೇಕಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 hour ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

15 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

16 hours ago