ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹುಣಸೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಹಾಸನ, ಕುಣಿಗಲ್, ಕೆಐಎಎಲ್, ಖಜೂರಿ, ತಿರುಮಲ, ಚಾಮರಾಜನಗರ, ಕೃಷ್ಣರಾಜಪೇಟೆ, ಬೀದರ್, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ.
ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೋಚಾ ಚಂಡಮಾರುತದ ಸೃಷ್ಟಿ ಮತ್ತು ನಂತರ ಅದರ ಪ್ರಭಾವ ತೀವ್ರಗೊಂಡಿದ್ದು, ವ್ಯಾಪಕವಾದ ಗುಡುಗು ಸಹಿತ ಮಳೆಗೆ ಕಾರಣವಾಗಲಿದೆ. ಮತದಾನ ಸಾಮಗ್ರಿಗಳೊಂದಿಗೆ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಸಾಗಣೆ ಮತ್ತು ಚಲನೆಯ ಮೇಲೆ ಪರಿಣಾಮ ಬೀರಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹವಾಮಾನ ತಜ್ಞರ ಪ್ರಕಾರ, ಆಗ್ನೇಯ ಬಂಗಾಳದಲ್ಲಿ ಶೀಘ್ರದಲ್ಲೇ ಚಂಡಮಾರುತದ ಪರಿಚಲನೆ ರಚನೆಯಾಗುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಮೇ 7ರ ಸುಮಾರಿಗೆ ಇದೇ ಪ್ರದೇಶದಲ್ಲಿ ಅಪಾರ ಮಳೆಯಾಗುವ ಸಾಧ್ಯತೆ ಇದೆ. ಇದು ಮೇ 8 ರ ಸುಮಾರಿಗೆ ಇದು ಇನ್ನಷ್ಟು ಬಲಗೊಳ್ಳಲಿದೆ.
ಏಜೆನ್ಸಿ ಪ್ರಕಾರ, ತಾಪಮಾನ ಏರಿಕೆಯ ಹೊರತಾಗಿಯೂ, ಮುಂದಿನ ವಾರದವರೆಗೆ ಈ ರಾಜ್ಯಗಳಲ್ಲಿ ಶಾಖದ ಅಲೆಯು ಕಡಿಮೆ ಇರಲಿದೆ. ಮೇ ತಿಂಗಳ ಎರಡನೇ ವಾರದಿಂದ ಹವಾಮಾನವು ಸಂಪೂರ್ಣವಾಗಿ ಬದಲಾಗುತ್ತದೆ. ಜನರು ಆಗಾಗ ಬಿಸಿಲಿನ ತಾಪವನ್ನು ಎದುರಿಸಬೇಕಾಗುತ್ತದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…