ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.
ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…