ರಾಜ್ಯದ ರಾಜಧಾನಿಯಲ್ಲಿ ಕಳೆದ ಹಲವು ದಿನಗಳಿಂದ ವರುಣ ಆರ್ಭಟ ಜೋರಾಗಿದ್ದು, ಬೆಳಿಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇರುತ್ತದೆ. ಆದರೆ ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟದಿಂದ ಸಿಲಿಕಾನ್ ಸಿಟಿಯ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.
ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…