ರಾಜ್ಯದ 4370 ಹಳ್ಳಿಗಳಲ್ಲಿ ಸ್ಮಶಾನದ ಕೊರತೆ….! |

January 8, 2022
12:02 PM

ರಾಜ್ಯದಾದ್ಯಂತ 4370 ಹಳ್ಳಿಗಳು ಸ್ಮಶಾನ ಭೂಮಿಯನ್ನು ಹೊಂದಿಲ್ಲ. ಆದುದರಿಂದ ರಾಜ್ಯ ಸರ್ಕಾರವು ಈಗ ಈ ಉದ್ದೇಶಕ್ಕಾಗಿ ಭೂಮಿಯನ್ನು ಸಂಗ್ರಹಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಅದನ್ನು ಅಂತಿಮಗೊಳಿಸುವ ನಿರೀಕ್ಷೆಯನ್ನು ಹೊಂದಿದೆ.

ಇತ್ತಿಚೆಗೆ ನಡೆದ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ಹಲವು ಗ್ರಾಮಗಳಲ್ಲಿ ಜಾಗದ ಕೊರತೆ, ಸ್ಮಶಾನದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ತದನಂತರ ಒಟ್ಟು‌ 29,438 ಹಳ್ಳಿಗಳಲ್ಲಿ 4370 ಹಳ್ಳಿಗಳು ಸ್ಮಶಾನದ ಭೂಮಿಯನ್ನು ಹೊಂದಿಲ್ಲ ಎಂಬುದಾಗಿ ವರದಿಯಾಗಿದೆ. ಇವುಗಳಲ್ಲಿ ಹೆಚ್ಚಿನ ಗ್ರಾಮಗಳು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಚಿತ್ರದುರ್ಗ, ರಾಯಚೂರು ಮತ್ತು ಕೆಲವು ಬಾಗಲಕೋಟೆ, ಕಲಬುರಗಿ, ಯಾದಗಿರಿ, ಗದಗ ಮತ್ತು ಕೊಪ್ಪಳದಲ್ಲಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡದ ನಾಲ್ಕು, ಚಿಕ್ಕಬಳ್ಳಾಪುರದ ಆರು ಮತ್ತು ಬೆಂಗಳೂರು ಗಾಮಾಂತರ ಜಿಲ್ಲೆಯ ಎಂಟು ಗ್ರಾಮಗಳಿಗೆ  ಸ್ಮಶಾನ ಭೂಮಿ ಇಲ್ಲ. ಮಾತ್ರವಲ್ಲದೆ ಮಲೆನಾಡು ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಅರಣ್ಯ ಪ್ರದೇಶಗಳನ್ನು ಸ್ಮಶಾನ ಭೂಮಿಯಾಗಿ ಬಳಸುತ್ತಿದ್ದಾರೆ. ಈ ಸ್ಥಳಗಳಲ್ಲಿ ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರಿಸುವಂತೆ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದು ಪರ್ಯಾಯ ಜಮೀನು ನೀಡಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror