Advertisement
ಸುದ್ದಿಗಳು

ರಾಜ್ಯದ 4370 ಹಳ್ಳಿಗಳಲ್ಲಿ ಸ್ಮಶಾನದ ಕೊರತೆ….! |

Share

ರಾಜ್ಯದಾದ್ಯಂತ 4370 ಹಳ್ಳಿಗಳು ಸ್ಮಶಾನ ಭೂಮಿಯನ್ನು ಹೊಂದಿಲ್ಲ. ಆದುದರಿಂದ ರಾಜ್ಯ ಸರ್ಕಾರವು ಈಗ ಈ ಉದ್ದೇಶಕ್ಕಾಗಿ ಭೂಮಿಯನ್ನು ಸಂಗ್ರಹಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಅದನ್ನು ಅಂತಿಮಗೊಳಿಸುವ ನಿರೀಕ್ಷೆಯನ್ನು ಹೊಂದಿದೆ.

Advertisement
Advertisement

ಇತ್ತಿಚೆಗೆ ನಡೆದ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ಹಲವು ಗ್ರಾಮಗಳಲ್ಲಿ ಜಾಗದ ಕೊರತೆ, ಸ್ಮಶಾನದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ತದನಂತರ ಒಟ್ಟು‌ 29,438 ಹಳ್ಳಿಗಳಲ್ಲಿ 4370 ಹಳ್ಳಿಗಳು ಸ್ಮಶಾನದ ಭೂಮಿಯನ್ನು ಹೊಂದಿಲ್ಲ ಎಂಬುದಾಗಿ ವರದಿಯಾಗಿದೆ. ಇವುಗಳಲ್ಲಿ ಹೆಚ್ಚಿನ ಗ್ರಾಮಗಳು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಚಿತ್ರದುರ್ಗ, ರಾಯಚೂರು ಮತ್ತು ಕೆಲವು ಬಾಗಲಕೋಟೆ, ಕಲಬುರಗಿ, ಯಾದಗಿರಿ, ಗದಗ ಮತ್ತು ಕೊಪ್ಪಳದಲ್ಲಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡದ ನಾಲ್ಕು, ಚಿಕ್ಕಬಳ್ಳಾಪುರದ ಆರು ಮತ್ತು ಬೆಂಗಳೂರು ಗಾಮಾಂತರ ಜಿಲ್ಲೆಯ ಎಂಟು ಗ್ರಾಮಗಳಿಗೆ  ಸ್ಮಶಾನ ಭೂಮಿ ಇಲ್ಲ. ಮಾತ್ರವಲ್ಲದೆ ಮಲೆನಾಡು ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಅರಣ್ಯ ಪ್ರದೇಶಗಳನ್ನು ಸ್ಮಶಾನ ಭೂಮಿಯಾಗಿ ಬಳಸುತ್ತಿದ್ದಾರೆ. ಈ ಸ್ಥಳಗಳಲ್ಲಿ ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರಿಸುವಂತೆ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದು ಪರ್ಯಾಯ ಜಮೀನು ನೀಡಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

38 minutes ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

49 minutes ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

22 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago