Advertisement
ಸುದ್ದಿಗಳು

ರಾಜ್ಯದ 4370 ಹಳ್ಳಿಗಳಲ್ಲಿ ಸ್ಮಶಾನದ ಕೊರತೆ….! |

Share

ರಾಜ್ಯದಾದ್ಯಂತ 4370 ಹಳ್ಳಿಗಳು ಸ್ಮಶಾನ ಭೂಮಿಯನ್ನು ಹೊಂದಿಲ್ಲ. ಆದುದರಿಂದ ರಾಜ್ಯ ಸರ್ಕಾರವು ಈಗ ಈ ಉದ್ದೇಶಕ್ಕಾಗಿ ಭೂಮಿಯನ್ನು ಸಂಗ್ರಹಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಅದನ್ನು ಅಂತಿಮಗೊಳಿಸುವ ನಿರೀಕ್ಷೆಯನ್ನು ಹೊಂದಿದೆ.

ಇತ್ತಿಚೆಗೆ ನಡೆದ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ಹಲವು ಗ್ರಾಮಗಳಲ್ಲಿ ಜಾಗದ ಕೊರತೆ, ಸ್ಮಶಾನದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ತದನಂತರ ಒಟ್ಟು‌ 29,438 ಹಳ್ಳಿಗಳಲ್ಲಿ 4370 ಹಳ್ಳಿಗಳು ಸ್ಮಶಾನದ ಭೂಮಿಯನ್ನು ಹೊಂದಿಲ್ಲ ಎಂಬುದಾಗಿ ವರದಿಯಾಗಿದೆ. ಇವುಗಳಲ್ಲಿ ಹೆಚ್ಚಿನ ಗ್ರಾಮಗಳು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಚಿತ್ರದುರ್ಗ, ರಾಯಚೂರು ಮತ್ತು ಕೆಲವು ಬಾಗಲಕೋಟೆ, ಕಲಬುರಗಿ, ಯಾದಗಿರಿ, ಗದಗ ಮತ್ತು ಕೊಪ್ಪಳದಲ್ಲಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡದ ನಾಲ್ಕು, ಚಿಕ್ಕಬಳ್ಳಾಪುರದ ಆರು ಮತ್ತು ಬೆಂಗಳೂರು ಗಾಮಾಂತರ ಜಿಲ್ಲೆಯ ಎಂಟು ಗ್ರಾಮಗಳಿಗೆ  ಸ್ಮಶಾನ ಭೂಮಿ ಇಲ್ಲ. ಮಾತ್ರವಲ್ಲದೆ ಮಲೆನಾಡು ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಅರಣ್ಯ ಪ್ರದೇಶಗಳನ್ನು ಸ್ಮಶಾನ ಭೂಮಿಯಾಗಿ ಬಳಸುತ್ತಿದ್ದಾರೆ. ಈ ಸ್ಥಳಗಳಲ್ಲಿ ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರಿಸುವಂತೆ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದು ಪರ್ಯಾಯ ಜಮೀನು ನೀಡಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 hour ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago