Advertisement
ಸುದ್ದಿಗಳು

ರಾಜ್ಯದ 4370 ಹಳ್ಳಿಗಳಲ್ಲಿ ಸ್ಮಶಾನದ ಕೊರತೆ….! |

Share

ರಾಜ್ಯದಾದ್ಯಂತ 4370 ಹಳ್ಳಿಗಳು ಸ್ಮಶಾನ ಭೂಮಿಯನ್ನು ಹೊಂದಿಲ್ಲ. ಆದುದರಿಂದ ರಾಜ್ಯ ಸರ್ಕಾರವು ಈಗ ಈ ಉದ್ದೇಶಕ್ಕಾಗಿ ಭೂಮಿಯನ್ನು ಸಂಗ್ರಹಿಸಲು ಕ್ರಮಗಳನ್ನು ಪ್ರಾರಂಭಿಸಿದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಅದನ್ನು ಅಂತಿಮಗೊಳಿಸುವ ನಿರೀಕ್ಷೆಯನ್ನು ಹೊಂದಿದೆ.

ಇತ್ತಿಚೆಗೆ ನಡೆದ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ರಾಜ್ಯಾದ್ಯಂತ ಹಲವು ಗ್ರಾಮಗಳಲ್ಲಿ ಜಾಗದ ಕೊರತೆ, ಸ್ಮಶಾನದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ತದನಂತರ ಒಟ್ಟು‌ 29,438 ಹಳ್ಳಿಗಳಲ್ಲಿ 4370 ಹಳ್ಳಿಗಳು ಸ್ಮಶಾನದ ಭೂಮಿಯನ್ನು ಹೊಂದಿಲ್ಲ ಎಂಬುದಾಗಿ ವರದಿಯಾಗಿದೆ. ಇವುಗಳಲ್ಲಿ ಹೆಚ್ಚಿನ ಗ್ರಾಮಗಳು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಹಾಸನ, ಚಿತ್ರದುರ್ಗ, ರಾಯಚೂರು ಮತ್ತು ಕೆಲವು ಬಾಗಲಕೋಟೆ, ಕಲಬುರಗಿ, ಯಾದಗಿರಿ, ಗದಗ ಮತ್ತು ಕೊಪ್ಪಳದಲ್ಲಿದೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡದ ನಾಲ್ಕು, ಚಿಕ್ಕಬಳ್ಳಾಪುರದ ಆರು ಮತ್ತು ಬೆಂಗಳೂರು ಗಾಮಾಂತರ ಜಿಲ್ಲೆಯ ಎಂಟು ಗ್ರಾಮಗಳಿಗೆ  ಸ್ಮಶಾನ ಭೂಮಿ ಇಲ್ಲ. ಮಾತ್ರವಲ್ಲದೆ ಮಲೆನಾಡು ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಗ್ರಾಮಸ್ಥರು ಅರಣ್ಯ ಪ್ರದೇಶಗಳನ್ನು ಸ್ಮಶಾನ ಭೂಮಿಯಾಗಿ ಬಳಸುತ್ತಿದ್ದಾರೆ. ಈ ಸ್ಥಳಗಳಲ್ಲಿ ಕಂದಾಯ ಇಲಾಖೆಗೆ ಭೂಮಿ ಹಸ್ತಾಂತರಿಸುವಂತೆ ಕೋರಿ ಅರಣ್ಯ ಇಲಾಖೆಗೆ ಪತ್ರ ಬರೆದು ಪರ್ಯಾಯ ಜಮೀನು ನೀಡಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 hour ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 hour ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

9 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

10 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

19 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

19 hours ago