ರಾಜ್ಯಾದ್ಯಂತ ಒಟ್ಟು 27,000 ಅತಿಥಿ ಶಿಕ್ಷಕರ ನೇಮಕ | ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ

May 29, 2023
6:08 PM

2023-24ರ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಇನ್ನೇನು ಮಕ್ಕಳಿಗೆ ಪಾಠ-ಪ್ರವಚನಗಳು ಆರಂಭವಾಗಬೇಕು. ಆದರೆ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣಿಸುತ್ತಿದೆ. ಇದು ಖಂಡಿತ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮಮ ಬೀರುತ್ತದೆ. ಆದರೆ ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ  ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ ನೇಮಕಕ್ಕೆ ನಿರ್ಧರಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರವನ್ನು ನೇಮಕ ಸರ್ಕಾರ ಮಾಡಲಿದೆ.

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಮಾರ್ಚ್ 8ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು.

ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror