2023-24ರ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಇನ್ನೇನು ಮಕ್ಕಳಿಗೆ ಪಾಠ-ಪ್ರವಚನಗಳು ಆರಂಭವಾಗಬೇಕು. ಆದರೆ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣಿಸುತ್ತಿದೆ. ಇದು ಖಂಡಿತ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮಮ ಬೀರುತ್ತದೆ. ಆದರೆ ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ ನೇಮಕಕ್ಕೆ ನಿರ್ಧರಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರವನ್ನು ನೇಮಕ ಸರ್ಕಾರ ಮಾಡಲಿದೆ.
ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…