Advertisement
ಉದ್ಯೋಗ ಮಾಹಿತಿ

ರಾಜ್ಯಾದ್ಯಂತ ಒಟ್ಟು 27,000 ಅತಿಥಿ ಶಿಕ್ಷಕರ ನೇಮಕ | ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ

Share

2023-24ರ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಇನ್ನೇನು ಮಕ್ಕಳಿಗೆ ಪಾಠ-ಪ್ರವಚನಗಳು ಆರಂಭವಾಗಬೇಕು. ಆದರೆ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣಿಸುತ್ತಿದೆ. ಇದು ಖಂಡಿತ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮಮ ಬೀರುತ್ತದೆ. ಆದರೆ ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ  ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ ನೇಮಕಕ್ಕೆ ನಿರ್ಧರಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರವನ್ನು ನೇಮಕ ಸರ್ಕಾರ ಮಾಡಲಿದೆ.

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಮಾರ್ಚ್ 8ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು.

ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

9 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

9 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

10 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

17 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

21 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

22 hours ago