Advertisement
ಉದ್ಯೋಗ ಮಾಹಿತಿ

ರಾಜ್ಯಾದ್ಯಂತ ಒಟ್ಟು 27,000 ಅತಿಥಿ ಶಿಕ್ಷಕರ ನೇಮಕ | ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ತೀರ್ಮಾನ

Share

2023-24ರ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಇನ್ನೇನು ಮಕ್ಕಳಿಗೆ ಪಾಠ-ಪ್ರವಚನಗಳು ಆರಂಭವಾಗಬೇಕು. ಆದರೆ ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣಿಸುತ್ತಿದೆ. ಇದು ಖಂಡಿತ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮಮ ಬೀರುತ್ತದೆ. ಆದರೆ ಕರ್ನಾಟಕದಲ್ಲಿ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ  ಇನ್ನೂ ಮುಗಿಯದ ಹಿನ್ನೆಲೆ ತಾತ್ಕಾಲಿಕವಾಗಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಸದ್ಯ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅತಿಥಿ ಶಿಕ್ಷಕರ ನೇಮಕಕ್ಕೆ ನಿರ್ಧರಿಸಲಾಗಿದೆ. ಅದರಂತೆ ಜಿಲ್ಲಾವಾರು ಒಟ್ಟು 27 ಸಾವಿರ ಅತಿಥಿ ಶಿಕ್ಷಕರವನ್ನು ನೇಮಕ ಸರ್ಕಾರ ಮಾಡಲಿದೆ.

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ -2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಮಾರ್ಚ್ 8ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ಆಯ್ಕೆ ಪಟ್ಟಿಯು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿತ್ತು.

ಇದಕ್ಕೂ ಮುನ್ನ ಬಿಡುಗಡೆಯಾಗಿದ್ದ ತಾತ್ಕಾಲಿಕ ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬಂಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ಹೀಗಾಗಿ ಒಂದಷ್ಟು ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪರಿಣಾಮ, ಜನವರಿ 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

1 hour ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

7 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

8 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

23 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago