ರಾಜ್ಯದ ಹಲವೆಡೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣಕನ್ನಡ, ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಗಳಲ್ಲಿ ಜಿಲ್ಲಾಡಳಿತವು ಕೆಲವು ತಾಲೂಕುಗಳಲ್ಲಿ ಶಾಲೆ ಹಾಗೂ ಕಾಲೇಜುಗಳಿಗೆ ಸೋಮವಾರ (ಆಗಸ್ಟ್ 3) ರಜೆ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆಯ ಮುನ್ಸೂಚನೆ ಹಾಗೂ ಜಿಲ್ಲಾಮಟ್ಟದ ಪರಿಸ್ಥಿತಿಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ರಜೆ ಘೋಷಿಸಲಾದ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲೂಕುಗಳು, ಹಾಗೂ ಉತ್ತರಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾರೀ ಮಳೆಯ ಪರಿಣಾಮ ಸಂಕಷ್ಟ ಎದುರಿಸುತ್ತಿದ್ದಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ನೀರು ನಿಂತಿರುವ ಪ್ರದೇಶಗಳು, ನದಿ, ಹೊಳೆ, ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.
ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ಹವಾಮಾನ ಪರಿಸ್ಥಿತಿಯನ್ನು ಅವಲಂಬಿಸಿ ಮುಂದಿನ ದಿನಗಳಲ್ಲಿಯೂ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾಡಳಿತವು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗದಂತೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಮನವಿ ಮಾಡಿದೆ.
Heavy rainfall across Karnataka has prompted district administrations to declare a holiday for schools and colleges in four districts/affected taluks on August 3 as a precautionary measure. Authorities have advised people to avoid rivers, waterlogged areas and the seashore until weather conditions improve

