#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

October 6, 2023
3:04 PM
ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ.

ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದ್ದು .ಅದರಲ್ಲೂ ಕಾಫಿನಾಡು ಚಿಕ್ಕಮಗಳೂರು ಟಾಪ್ 10ರ ಪೈಕಿ 2ನೇ ಸ್ಥಾನ ಲಭಿಸಿದ್ದು ಕಾಫಿ ನಾಡಿಗರು ಮತ್ತಷ್ಟು ಹೆಮ್ಮೆಪಡುವಂತಾಗಿದೆ.

Advertisement
Advertisement

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ ಎರಡು ರೀತಿಯಲ್ಲಿ ಗಾಳಿಯ ಗುಣಮಟ್ಟದ ಡೇಟಾವನ್ನು ವಿಶ್ಲೇಷಿಸುತ್ತದೆ. ಮೊದಲು ಸರ್ಕಾರದ PM2.5 ಡೇಟಾದಲ್ಲಿ ಎನ್‌ಸಿಆರ್ ಮತ್ತು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಲ್ಲಿ ಪಟ್ಟಿ ಮಾಡಲಾದ ಇತರ ನಗರಗಳಲ್ಲಿ ಹಿಂದಿನ ವರ್ಷಕ್ಕಿಂತ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯನ್ನು ಪತ್ತೆಹಚ್ಚಲು ಕಳೆದ ಒಂದು ವರ್ಷದ (1 ಅಕ್ಟೋಬರ್, 2022 ರಿಂದ 30 ಸೆಪ್ಟೆಂಬರ್, 2023) ಮಾಹಿತಿಯನ್ನು ಕಲೆ ಹಾಕಿ ವಿಶ್ಲೇಷಣೆ ಮಾಡಲಾಗುವುದು.

ಇನ್ನೊಂದು ಕಡೆ ಚಳಿಗಾಲದಲ್ಲಿ PM2.5 ಡೇಟಾ, ಸರಿಸುಮಾರು ಅಕ್ಟೋಬರ್-ಮಾರ್ಚ್ ಮಾಲಿನ್ಯದ ಮಟ್ಟಗಳು ಹೆಚ್ಚಾದಾಗ ಅದರ ಮಾಹಿತಿ ಪಡೆದು ವಿಶ್ಲೇಷಣೆ ಮಾಡಿ ಅತ್ಯಂತ ಶುದ್ಧಗಾಳಿ ಇರುವ ನಗರವನ್ನು ಪತ್ತೆ ಮಾಡಲಾಗುತ್ತದೆ. ಅತ್ಯಂತ ಶುದ್ಧ ಗಾಳಿ ಇರುವ ಸ್ಥಳಗಳ ಪೈಕಿ ಮೊದಲ ಸ್ಥಾನವನ್ನು ಮಿಜೋರಾಂನ ಐಜ್ವಾಲ್‌ ಪಡೆದು ಕೊಂಡರೆ, ಎರಡನೇ ಸ್ಥಾನವನ್ನು ಕಾಫಿನಾಡು ಚಿಕ್ಕಮಗಳೂರು ಪಡೆದು ಕೊಂಡಿದೆ, ಮೂರನೇ ಸ್ಥಾನದಲ್ಲಿ ಹರಿಯಾಣದ ಮಂಡಿಖೇರಾ ನಗರವಿದೆ ಉಳಿದಂತೆ 7 ಸ್ಥಾನಗಳಲ್ಲೂ ಕರ್ನಾಟಕವೇ ಇದೆ. ಕ್ರಮವಾಗಿ ಚಾಮರಾಜನಗರ, ಮಡಿಕೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಗದಗ, ಮೈಸೂರು ಸ್ಥಾನ ಪಡೆದಿವೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror