#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

October 6, 2023
3:04 PM
ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ.

ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದ್ದು .ಅದರಲ್ಲೂ ಕಾಫಿನಾಡು ಚಿಕ್ಕಮಗಳೂರು ಟಾಪ್ 10ರ ಪೈಕಿ 2ನೇ ಸ್ಥಾನ ಲಭಿಸಿದ್ದು ಕಾಫಿ ನಾಡಿಗರು ಮತ್ತಷ್ಟು ಹೆಮ್ಮೆಪಡುವಂತಾಗಿದೆ.

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ ಎರಡು ರೀತಿಯಲ್ಲಿ ಗಾಳಿಯ ಗುಣಮಟ್ಟದ ಡೇಟಾವನ್ನು ವಿಶ್ಲೇಷಿಸುತ್ತದೆ. ಮೊದಲು ಸರ್ಕಾರದ PM2.5 ಡೇಟಾದಲ್ಲಿ ಎನ್‌ಸಿಆರ್ ಮತ್ತು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಲ್ಲಿ ಪಟ್ಟಿ ಮಾಡಲಾದ ಇತರ ನಗರಗಳಲ್ಲಿ ಹಿಂದಿನ ವರ್ಷಕ್ಕಿಂತ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯನ್ನು ಪತ್ತೆಹಚ್ಚಲು ಕಳೆದ ಒಂದು ವರ್ಷದ (1 ಅಕ್ಟೋಬರ್, 2022 ರಿಂದ 30 ಸೆಪ್ಟೆಂಬರ್, 2023) ಮಾಹಿತಿಯನ್ನು ಕಲೆ ಹಾಕಿ ವಿಶ್ಲೇಷಣೆ ಮಾಡಲಾಗುವುದು.

ಇನ್ನೊಂದು ಕಡೆ ಚಳಿಗಾಲದಲ್ಲಿ PM2.5 ಡೇಟಾ, ಸರಿಸುಮಾರು ಅಕ್ಟೋಬರ್-ಮಾರ್ಚ್ ಮಾಲಿನ್ಯದ ಮಟ್ಟಗಳು ಹೆಚ್ಚಾದಾಗ ಅದರ ಮಾಹಿತಿ ಪಡೆದು ವಿಶ್ಲೇಷಣೆ ಮಾಡಿ ಅತ್ಯಂತ ಶುದ್ಧಗಾಳಿ ಇರುವ ನಗರವನ್ನು ಪತ್ತೆ ಮಾಡಲಾಗುತ್ತದೆ. ಅತ್ಯಂತ ಶುದ್ಧ ಗಾಳಿ ಇರುವ ಸ್ಥಳಗಳ ಪೈಕಿ ಮೊದಲ ಸ್ಥಾನವನ್ನು ಮಿಜೋರಾಂನ ಐಜ್ವಾಲ್‌ ಪಡೆದು ಕೊಂಡರೆ, ಎರಡನೇ ಸ್ಥಾನವನ್ನು ಕಾಫಿನಾಡು ಚಿಕ್ಕಮಗಳೂರು ಪಡೆದು ಕೊಂಡಿದೆ, ಮೂರನೇ ಸ್ಥಾನದಲ್ಲಿ ಹರಿಯಾಣದ ಮಂಡಿಖೇರಾ ನಗರವಿದೆ ಉಳಿದಂತೆ 7 ಸ್ಥಾನಗಳಲ್ಲೂ ಕರ್ನಾಟಕವೇ ಇದೆ. ಕ್ರಮವಾಗಿ ಚಾಮರಾಜನಗರ, ಮಡಿಕೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಗದಗ, ಮೈಸೂರು ಸ್ಥಾನ ಪಡೆದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror