ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದ್ದು .ಅದರಲ್ಲೂ ಕಾಫಿನಾಡು ಚಿಕ್ಕಮಗಳೂರು ಟಾಪ್ 10ರ ಪೈಕಿ 2ನೇ ಸ್ಥಾನ ಲಭಿಸಿದ್ದು ಕಾಫಿ ನಾಡಿಗರು ಮತ್ತಷ್ಟು ಹೆಮ್ಮೆಪಡುವಂತಾಗಿದೆ.
ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್ ಎರಡು ರೀತಿಯಲ್ಲಿ ಗಾಳಿಯ ಗುಣಮಟ್ಟದ ಡೇಟಾವನ್ನು ವಿಶ್ಲೇಷಿಸುತ್ತದೆ. ಮೊದಲು ಸರ್ಕಾರದ PM2.5 ಡೇಟಾದಲ್ಲಿ ಎನ್ಸಿಆರ್ ಮತ್ತು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಲ್ಲಿ ಪಟ್ಟಿ ಮಾಡಲಾದ ಇತರ ನಗರಗಳಲ್ಲಿ ಹಿಂದಿನ ವರ್ಷಕ್ಕಿಂತ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯನ್ನು ಪತ್ತೆಹಚ್ಚಲು ಕಳೆದ ಒಂದು ವರ್ಷದ (1 ಅಕ್ಟೋಬರ್, 2022 ರಿಂದ 30 ಸೆಪ್ಟೆಂಬರ್, 2023) ಮಾಹಿತಿಯನ್ನು ಕಲೆ ಹಾಕಿ ವಿಶ್ಲೇಷಣೆ ಮಾಡಲಾಗುವುದು.
ಇನ್ನೊಂದು ಕಡೆ ಚಳಿಗಾಲದಲ್ಲಿ PM2.5 ಡೇಟಾ, ಸರಿಸುಮಾರು ಅಕ್ಟೋಬರ್-ಮಾರ್ಚ್ ಮಾಲಿನ್ಯದ ಮಟ್ಟಗಳು ಹೆಚ್ಚಾದಾಗ ಅದರ ಮಾಹಿತಿ ಪಡೆದು ವಿಶ್ಲೇಷಣೆ ಮಾಡಿ ಅತ್ಯಂತ ಶುದ್ಧಗಾಳಿ ಇರುವ ನಗರವನ್ನು ಪತ್ತೆ ಮಾಡಲಾಗುತ್ತದೆ. ಅತ್ಯಂತ ಶುದ್ಧ ಗಾಳಿ ಇರುವ ಸ್ಥಳಗಳ ಪೈಕಿ ಮೊದಲ ಸ್ಥಾನವನ್ನು ಮಿಜೋರಾಂನ ಐಜ್ವಾಲ್ ಪಡೆದು ಕೊಂಡರೆ, ಎರಡನೇ ಸ್ಥಾನವನ್ನು ಕಾಫಿನಾಡು ಚಿಕ್ಕಮಗಳೂರು ಪಡೆದು ಕೊಂಡಿದೆ, ಮೂರನೇ ಸ್ಥಾನದಲ್ಲಿ ಹರಿಯಾಣದ ಮಂಡಿಖೇರಾ ನಗರವಿದೆ ಉಳಿದಂತೆ 7 ಸ್ಥಾನಗಳಲ್ಲೂ ಕರ್ನಾಟಕವೇ ಇದೆ. ಕ್ರಮವಾಗಿ ಚಾಮರಾಜನಗರ, ಮಡಿಕೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಗದಗ, ಮೈಸೂರು ಸ್ಥಾನ ಪಡೆದಿವೆ.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…