Advertisement
MIRROR FOCUS

#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

Share

ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದ್ದು .ಅದರಲ್ಲೂ ಕಾಫಿನಾಡು ಚಿಕ್ಕಮಗಳೂರು ಟಾಪ್ 10ರ ಪೈಕಿ 2ನೇ ಸ್ಥಾನ ಲಭಿಸಿದ್ದು ಕಾಫಿ ನಾಡಿಗರು ಮತ್ತಷ್ಟು ಹೆಮ್ಮೆಪಡುವಂತಾಗಿದೆ.

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ ಎರಡು ರೀತಿಯಲ್ಲಿ ಗಾಳಿಯ ಗುಣಮಟ್ಟದ ಡೇಟಾವನ್ನು ವಿಶ್ಲೇಷಿಸುತ್ತದೆ. ಮೊದಲು ಸರ್ಕಾರದ PM2.5 ಡೇಟಾದಲ್ಲಿ ಎನ್‌ಸಿಆರ್ ಮತ್ತು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಲ್ಲಿ ಪಟ್ಟಿ ಮಾಡಲಾದ ಇತರ ನಗರಗಳಲ್ಲಿ ಹಿಂದಿನ ವರ್ಷಕ್ಕಿಂತ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯನ್ನು ಪತ್ತೆಹಚ್ಚಲು ಕಳೆದ ಒಂದು ವರ್ಷದ (1 ಅಕ್ಟೋಬರ್, 2022 ರಿಂದ 30 ಸೆಪ್ಟೆಂಬರ್, 2023) ಮಾಹಿತಿಯನ್ನು ಕಲೆ ಹಾಕಿ ವಿಶ್ಲೇಷಣೆ ಮಾಡಲಾಗುವುದು.

ಇನ್ನೊಂದು ಕಡೆ ಚಳಿಗಾಲದಲ್ಲಿ PM2.5 ಡೇಟಾ, ಸರಿಸುಮಾರು ಅಕ್ಟೋಬರ್-ಮಾರ್ಚ್ ಮಾಲಿನ್ಯದ ಮಟ್ಟಗಳು ಹೆಚ್ಚಾದಾಗ ಅದರ ಮಾಹಿತಿ ಪಡೆದು ವಿಶ್ಲೇಷಣೆ ಮಾಡಿ ಅತ್ಯಂತ ಶುದ್ಧಗಾಳಿ ಇರುವ ನಗರವನ್ನು ಪತ್ತೆ ಮಾಡಲಾಗುತ್ತದೆ. ಅತ್ಯಂತ ಶುದ್ಧ ಗಾಳಿ ಇರುವ ಸ್ಥಳಗಳ ಪೈಕಿ ಮೊದಲ ಸ್ಥಾನವನ್ನು ಮಿಜೋರಾಂನ ಐಜ್ವಾಲ್‌ ಪಡೆದು ಕೊಂಡರೆ, ಎರಡನೇ ಸ್ಥಾನವನ್ನು ಕಾಫಿನಾಡು ಚಿಕ್ಕಮಗಳೂರು ಪಡೆದು ಕೊಂಡಿದೆ, ಮೂರನೇ ಸ್ಥಾನದಲ್ಲಿ ಹರಿಯಾಣದ ಮಂಡಿಖೇರಾ ನಗರವಿದೆ ಉಳಿದಂತೆ 7 ಸ್ಥಾನಗಳಲ್ಲೂ ಕರ್ನಾಟಕವೇ ಇದೆ. ಕ್ರಮವಾಗಿ ಚಾಮರಾಜನಗರ, ಮಡಿಕೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಗದಗ, ಮೈಸೂರು ಸ್ಥಾನ ಪಡೆದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago