Advertisement
MIRROR FOCUS

#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

Share

ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದ್ದು .ಅದರಲ್ಲೂ ಕಾಫಿನಾಡು ಚಿಕ್ಕಮಗಳೂರು ಟಾಪ್ 10ರ ಪೈಕಿ 2ನೇ ಸ್ಥಾನ ಲಭಿಸಿದ್ದು ಕಾಫಿ ನಾಡಿಗರು ಮತ್ತಷ್ಟು ಹೆಮ್ಮೆಪಡುವಂತಾಗಿದೆ.

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ ಎರಡು ರೀತಿಯಲ್ಲಿ ಗಾಳಿಯ ಗುಣಮಟ್ಟದ ಡೇಟಾವನ್ನು ವಿಶ್ಲೇಷಿಸುತ್ತದೆ. ಮೊದಲು ಸರ್ಕಾರದ PM2.5 ಡೇಟಾದಲ್ಲಿ ಎನ್‌ಸಿಆರ್ ಮತ್ತು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಲ್ಲಿ ಪಟ್ಟಿ ಮಾಡಲಾದ ಇತರ ನಗರಗಳಲ್ಲಿ ಹಿಂದಿನ ವರ್ಷಕ್ಕಿಂತ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯನ್ನು ಪತ್ತೆಹಚ್ಚಲು ಕಳೆದ ಒಂದು ವರ್ಷದ (1 ಅಕ್ಟೋಬರ್, 2022 ರಿಂದ 30 ಸೆಪ್ಟೆಂಬರ್, 2023) ಮಾಹಿತಿಯನ್ನು ಕಲೆ ಹಾಕಿ ವಿಶ್ಲೇಷಣೆ ಮಾಡಲಾಗುವುದು.

ಇನ್ನೊಂದು ಕಡೆ ಚಳಿಗಾಲದಲ್ಲಿ PM2.5 ಡೇಟಾ, ಸರಿಸುಮಾರು ಅಕ್ಟೋಬರ್-ಮಾರ್ಚ್ ಮಾಲಿನ್ಯದ ಮಟ್ಟಗಳು ಹೆಚ್ಚಾದಾಗ ಅದರ ಮಾಹಿತಿ ಪಡೆದು ವಿಶ್ಲೇಷಣೆ ಮಾಡಿ ಅತ್ಯಂತ ಶುದ್ಧಗಾಳಿ ಇರುವ ನಗರವನ್ನು ಪತ್ತೆ ಮಾಡಲಾಗುತ್ತದೆ. ಅತ್ಯಂತ ಶುದ್ಧ ಗಾಳಿ ಇರುವ ಸ್ಥಳಗಳ ಪೈಕಿ ಮೊದಲ ಸ್ಥಾನವನ್ನು ಮಿಜೋರಾಂನ ಐಜ್ವಾಲ್‌ ಪಡೆದು ಕೊಂಡರೆ, ಎರಡನೇ ಸ್ಥಾನವನ್ನು ಕಾಫಿನಾಡು ಚಿಕ್ಕಮಗಳೂರು ಪಡೆದು ಕೊಂಡಿದೆ, ಮೂರನೇ ಸ್ಥಾನದಲ್ಲಿ ಹರಿಯಾಣದ ಮಂಡಿಖೇರಾ ನಗರವಿದೆ ಉಳಿದಂತೆ 7 ಸ್ಥಾನಗಳಲ್ಲೂ ಕರ್ನಾಟಕವೇ ಇದೆ. ಕ್ರಮವಾಗಿ ಚಾಮರಾಜನಗರ, ಮಡಿಕೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಗದಗ, ಮೈಸೂರು ಸ್ಥಾನ ಪಡೆದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago