Advertisement
MIRROR FOCUS

#CleanAir | ಶುದ್ಧಗಾಳಿ ಇರುವ ನಗರಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಮೇಲುಗೈ : ಚಿಕ್ಕಮಗಳೂರಿಗೆ ದೇಶದಲ್ಲೇ 2ನೇ ಸ್ಥಾನ : ಹತ್ತರೊಳಗೆ ಇನ್ನಷ್ಟು ರಾಜ್ಯದ ಸಿಟಿಗಳು

Share

ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದ್ದು .ಅದರಲ್ಲೂ ಕಾಫಿನಾಡು ಚಿಕ್ಕಮಗಳೂರು ಟಾಪ್ 10ರ ಪೈಕಿ 2ನೇ ಸ್ಥಾನ ಲಭಿಸಿದ್ದು ಕಾಫಿ ನಾಡಿಗರು ಮತ್ತಷ್ಟು ಹೆಮ್ಮೆಪಡುವಂತಾಗಿದೆ.

ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ ರಾಜ್ಯವೆಂಬ ಗರಿ ಕರುನಾಡಿಗೆ ಸಿಕ್ಕಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ನ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. ರೆಸ್ಪೈರರ್ ಲಿವಿಂಗ್ ಸೈನ್ಸಸ್‌ ಎರಡು ರೀತಿಯಲ್ಲಿ ಗಾಳಿಯ ಗುಣಮಟ್ಟದ ಡೇಟಾವನ್ನು ವಿಶ್ಲೇಷಿಸುತ್ತದೆ. ಮೊದಲು ಸರ್ಕಾರದ PM2.5 ಡೇಟಾದಲ್ಲಿ ಎನ್‌ಸಿಆರ್ ಮತ್ತು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದಲ್ಲಿ ಪಟ್ಟಿ ಮಾಡಲಾದ ಇತರ ನಗರಗಳಲ್ಲಿ ಹಿಂದಿನ ವರ್ಷಕ್ಕಿಂತ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯನ್ನು ಪತ್ತೆಹಚ್ಚಲು ಕಳೆದ ಒಂದು ವರ್ಷದ (1 ಅಕ್ಟೋಬರ್, 2022 ರಿಂದ 30 ಸೆಪ್ಟೆಂಬರ್, 2023) ಮಾಹಿತಿಯನ್ನು ಕಲೆ ಹಾಕಿ ವಿಶ್ಲೇಷಣೆ ಮಾಡಲಾಗುವುದು.

ಇನ್ನೊಂದು ಕಡೆ ಚಳಿಗಾಲದಲ್ಲಿ PM2.5 ಡೇಟಾ, ಸರಿಸುಮಾರು ಅಕ್ಟೋಬರ್-ಮಾರ್ಚ್ ಮಾಲಿನ್ಯದ ಮಟ್ಟಗಳು ಹೆಚ್ಚಾದಾಗ ಅದರ ಮಾಹಿತಿ ಪಡೆದು ವಿಶ್ಲೇಷಣೆ ಮಾಡಿ ಅತ್ಯಂತ ಶುದ್ಧಗಾಳಿ ಇರುವ ನಗರವನ್ನು ಪತ್ತೆ ಮಾಡಲಾಗುತ್ತದೆ. ಅತ್ಯಂತ ಶುದ್ಧ ಗಾಳಿ ಇರುವ ಸ್ಥಳಗಳ ಪೈಕಿ ಮೊದಲ ಸ್ಥಾನವನ್ನು ಮಿಜೋರಾಂನ ಐಜ್ವಾಲ್‌ ಪಡೆದು ಕೊಂಡರೆ, ಎರಡನೇ ಸ್ಥಾನವನ್ನು ಕಾಫಿನಾಡು ಚಿಕ್ಕಮಗಳೂರು ಪಡೆದು ಕೊಂಡಿದೆ, ಮೂರನೇ ಸ್ಥಾನದಲ್ಲಿ ಹರಿಯಾಣದ ಮಂಡಿಖೇರಾ ನಗರವಿದೆ ಉಳಿದಂತೆ 7 ಸ್ಥಾನಗಳಲ್ಲೂ ಕರ್ನಾಟಕವೇ ಇದೆ. ಕ್ರಮವಾಗಿ ಚಾಮರಾಜನಗರ, ಮಡಿಕೇರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ಗದಗ, ಮೈಸೂರು ಸ್ಥಾನ ಪಡೆದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

4 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

4 hours ago

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

20 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago