Advertisement
ವೆದರ್ ಮಿರರ್

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

Share

ಮಾರ್ಚ್‌ 16ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಬೇಸಿಗೆ ಮಳೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.

ಕರಾವಳಿ ಭಾಗ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದ ವೇಳೆ ಬಿಸಿಲು–ಮೋಡ ಮಿಶ್ರ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈ ಬೇಸಿಗೆ ಮಳೆಯು ಮಾರ್ಚ್‌ 21ರವರೆಗೆ ಮುಂದುವರಿಯುವ ಲಕ್ಷಣಗಳು ಕಂಡುಬರುತ್ತಿವೆ.

ಮಲೆನಾಡು ಭಾಗ :  ಕೊಡಗು ಜಿಲ್ಲೆಯಲ್ಲಿಯೂ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ಪ್ರದೇಶಗಳು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ–ರಾತ್ರಿ ವೇಳೆ ಮಳೆಯ ಲಕ್ಷಣಗಳು ಗೋಚರಿಸುತ್ತಿವೆ. ಈ ಭಾಗದಲ್ಲಿಯೂ ಬೇಸಿಗೆ ಮಳೆಯ ಚಟುವಟಿಕೆಗಳು ಮಾರ್ಚ್‌ 21ರವರೆಗೆ ಮುಂದುವರಿಯುವ ಸೂಚನೆಗಳು ಇವೆ.

ಉತ್ತರ ಒಳನಾಡು :  ನಿನ್ನೆ ಧಾರವಾಡದಲ್ಲಿ ಅನಿರೀಕ್ಷಿತ ಮಳೆಯಾಗಿದೆ. ಇವತ್ತು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಗಾಳಿಯ ಒತ್ತಡ ಹೆಚ್ಚಾದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡು :  ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಜೆ–ರಾತ್ರಿ ಮೋಡದ ವಾತಾವರಣ ಇರಲಿದೆ. ಇವತ್ತು ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ತಾಪಮಾನ ಏರಿಕೆಯಿಂದ ಮಾರ್ಚ್‌ 16ರಿಂದ ಒಂದೆರಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Thunderstorms and scattered summer rains are likely across coastal, Malnad, and parts of north interior Karnataka till March 21. Rising temperatures may also trigger rainfall activity in select south interior districts from March 16 onwards.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

14 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

15 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

16 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago