26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಮಳೆಯ ಚಟುವಟಿಕೆ ಮುಂದುವರಿದಿದ್ದು, ಮಾರ್ಚ್ 26ರ ಬೆಳಿಗ್ಗೆ 8 ಗಂಟೆಯವರೆಗೆ ಹಲವೆಡೆ ಮಧ್ಯಾಹ್ನ ನಂತರ ಹಾಗೂ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕೆಲ ಭಾಗಗಳಲ್ಲಿ ಸಾಮಾನ್ಯ ಮಳೆಯೂ ಸಂಭವಿಸುವ ಸಾಧ್ಯತೆ ಇದೆ.
ಕರಾವಳಿ ಭಾಗ
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮುಂದಿನ ಒಂದೆರಡು ದಿನ ಮಳೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದರೂ, ಏಪ್ರಿಲ್ 4 ಅಥವಾ 5ರವರೆಗೆ ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದೆ.
ಮಲೆನಾಡು ಭಾಗ
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಸಂಜೆ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದ್ದು, ಈ ಬೇಸಿಗೆ ಮಳೆ ಏಪ್ರಿಲ್ ಮೊದಲ ವಾರದವರೆಗೂ ಮುಂದುವರಿಯಬಹುದು.
ಉತ್ತರ ಒಳನಾಡು
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದರೆ ಮಳೆಯಾಗುವ ಲಕ್ಷಣಗಳಿವೆ. ಮಧ್ಯಮ ಸ್ತರದಲ್ಲಿ ಉತ್ತರ ಕರ್ನಾಟಕ ಹಾಗೂ ಮಧ್ಯ ಭಾರತದಲ್ಲಿ ಪ್ರತ್ಯಾವರ್ತ ಮಾರುತಗಳ ಚಲನೆಯಿಂದ ಉತ್ತರ ಕರ್ನಾಟಕದಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು
ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 28ರ ನಂತರ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲೂ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…