ಮಕ್ಕಳ ಭವಿಷ್ಯಕ್ಕಾಗಿ ಕಾಲಾವಕಾಶ | ರಾಜ್ಯದ ಅನಧಿಕೃತ ಶಾಲೆಗಳಿಗೆ ನಿಯಮ ಉಲ್ಲಂಘನೆ ಸರಿಪಡಿಸಲು ಇನ್ನೊಂದು ಚಾನ್ಸ್ | ಶಿಕ್ಷಣ ಇಲಾಖೆ

March 28, 2023
7:54 PM

ರಾಜ್ಯದಲ್ಲಿನ ಅನಧಿಕೃತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಇನ್ನೊಂದು ಚಾನ್ಸ್ ನೀಡಿದೆ. ಶಾಲೆಗಳು ನಿಯಮ ಉಲ್ಲಂಘನೆಯನ್ನು ಸರಿಪಡಿಸಲು ಇನ್ನೂ ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಲ್ಲಿ 1,600 ಅನಧಿಕೃತ ಶಾಲೆಗಳನ್ನು ಗುರುತಿಸಿದೆ. ಅವುಗಳಲ್ಲಿ 937 ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿವೆ. ಅಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ ಎಂಬುದು ತಿಳಿದಿಲ್ಲ. ಇಲಾಖೆ ಮೂಲಗಳು ವಿದ್ಯಾರ್ಥಿಗಳು ಲಕ್ಷಗಳಲ್ಲಿರಬಹುದು ಎಂದಿವೆ.

‘ನಾವು ಅಂತಹ ಶಾಲೆಗಳ ಸಮೀಕ್ಷೆಯನ್ನು ನಡೆಸಿದ್ದೇವೆ ಮತ್ತು ಡಿಎಸ್ಇಎಲ್‌ಗೆ ವರದಿಯನ್ನು ಸಲ್ಲಿಸಿದ್ದೇವೆ’ ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ಆರ್ ವಿಶಾಲ್ ಹೇಳಿದರು.

‘ಶಾಲಾ ಶಿಕ್ಷಣಕ್ಕೆ ತೊಂದರೆ ಕೊಡಲು ಬಯಸುವುದಿಲ್ಲ : ಬೋರ್ಡ್ ಪರೀಕ್ಷೆಯ ನಂತರ ಅಂತಹ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಇದಕ್ಕೂ ಮೊದಲು ಹೇಳಿದ್ದರು.

ಅಂತಹ ಶಾಲೆಗಳ ವಿರುದ್ಧದ ಸಾಮಾನ್ಯ ದೂರುಗಳೆಂದರೆ, ಸರ್ಕಾರದ ಸಂಯೋಜನೆಯಿಲ್ಲದೆ ತರಗತಿಗಳನ್ನು ನಡೆಸುವುದು, ಸಂಯೋಜನೆ ಕುರಿತು ಪೋಷಕರನ್ನು ತಪ್ಪುದಾರಿಗೆಳೆಯುವುದು, ಯಾವುದೇ ಅನುಮತಿಯಿಲ್ಲದ ಗ್ರೇಡ್‌ಗಳಿಗೆ ತರಗತಿಗಳನ್ನು ನಡೆಸುವುದು ಹಾಗು ಕಟ್ಟಡಗಳು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ. ಇಂತಹ ಶಾಲೆಗಳು ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಒಂದಾದ ಪ್ರಮುಖ ಸಂಸ್ಥೆಯು ನಗರದಲ್ಲಿ ಮತ್ತು ಇತರೆಡೆ ಯಾವುದೇ ಸಂಯೋಜನೆಯಿಲ್ಲದ ಅನೇಕ ಶಾಖೆಗಳನ್ನು ಹೊಂದಿದೆ. ಆದರೂ, ಅದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಇಎಸ್ಇ) ನಿಂದ ಸಂಯೋಜಿತ ಎಂದು ಹೇಳಿಕೊಳ್ಳುತ್ತದೆ.

Advertisement

ಮೂಲಗಳ ಪ್ರಕಾರ, ಅನಧಿಕೃತ ಶಾಲೆಗಳನ್ನು ಸರಿಪಡಿಸಲು ಸಮಯ ನೀಡಲಾಗುತ್ತದೆ. ‘ನಾವು ಮಕ್ಕಳ ಶಾಲಾ ಶಿಕ್ಷಣವನ್ನು ಅಡ್ಡಿಪಡಿಸಲು ಬಯಸುವುದಿಲ್ಲ. ಅಂತಹ ಶಾಲೆಗಳನ್ನು ಮುಚ್ಚುವುದು ಅಥವಾ ತರಗತಿಗಳನ್ನು ತಕ್ಷಣವೇ ನಿಲ್ಲಿಸುವುದು ಅರ್ಥವಲ್ಲ. ಏಕೆಂದರೆ, ಇದು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಸಂಬಂಧಿತ ದಾಖಲೆಗಳನ್ನು ಸಲ್ಲಿಸಲು ನಾವು ಅವರಿಗೆ ಸಮಯವನ್ನು ನೀಡುತ್ತೇವೆ. ಇದರಿಂದ ಅವರು ತರಗತಿಗಳನ್ನು ಮುಂದುವರಿಸಲು ಅವಕಾಶ ಮಾಡಿಕೊಡಲಾಗುತ್ತದೆ’ ಎಂದು ಅವರು ಹೇಳಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ
May 21, 2025
10:38 PM
by: The Rural Mirror ಸುದ್ದಿಜಾಲ
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ
May 21, 2025
10:31 PM
by: The Rural Mirror ಸುದ್ದಿಜಾಲ
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ
May 21, 2025
10:25 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ
May 21, 2025
10:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group