Advertisement
ಸುದ್ದಿಗಳು

ಮಕ್ಕಳ ಭವಿಷ್ಯಕ್ಕಾಗಿ ಕಾಲಾವಕಾಶ | ರಾಜ್ಯದ ಅನಧಿಕೃತ ಶಾಲೆಗಳಿಗೆ ನಿಯಮ ಉಲ್ಲಂಘನೆ ಸರಿಪಡಿಸಲು ಇನ್ನೊಂದು ಚಾನ್ಸ್ | ಶಿಕ್ಷಣ ಇಲಾಖೆ

Share

ರಾಜ್ಯದಲ್ಲಿನ ಅನಧಿಕೃತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಇನ್ನೊಂದು ಚಾನ್ಸ್ ನೀಡಿದೆ. ಶಾಲೆಗಳು ನಿಯಮ ಉಲ್ಲಂಘನೆಯನ್ನು ಸರಿಪಡಿಸಲು ಇನ್ನೂ ಕಾಲಾವಕಾಶ ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಲ್ಲಿ 1,600 ಅನಧಿಕೃತ ಶಾಲೆಗಳನ್ನು ಗುರುತಿಸಿದೆ. ಅವುಗಳಲ್ಲಿ 937 ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿವೆ. ಅಂತಹ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ ಎಂಬುದು ತಿಳಿದಿಲ್ಲ. ಇಲಾಖೆ ಮೂಲಗಳು ವಿದ್ಯಾರ್ಥಿಗಳು ಲಕ್ಷಗಳಲ್ಲಿರಬಹುದು ಎಂದಿವೆ.

‘ನಾವು ಅಂತಹ ಶಾಲೆಗಳ ಸಮೀಕ್ಷೆಯನ್ನು ನಡೆಸಿದ್ದೇವೆ ಮತ್ತು ಡಿಎಸ್ಇಎಲ್‌ಗೆ ವರದಿಯನ್ನು ಸಲ್ಲಿಸಿದ್ದೇವೆ’ ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ಆರ್ ವಿಶಾಲ್ ಹೇಳಿದರು.

‘ಶಾಲಾ ಶಿಕ್ಷಣಕ್ಕೆ ತೊಂದರೆ ಕೊಡಲು ಬಯಸುವುದಿಲ್ಲ : ಬೋರ್ಡ್ ಪರೀಕ್ಷೆಯ ನಂತರ ಅಂತಹ ಶಾಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಇದಕ್ಕೂ ಮೊದಲು ಹೇಳಿದ್ದರು.

ಅಂತಹ ಶಾಲೆಗಳ ವಿರುದ್ಧದ ಸಾಮಾನ್ಯ ದೂರುಗಳೆಂದರೆ, ಸರ್ಕಾರದ ಸಂಯೋಜನೆಯಿಲ್ಲದೆ ತರಗತಿಗಳನ್ನು ನಡೆಸುವುದು, ಸಂಯೋಜನೆ ಕುರಿತು ಪೋಷಕರನ್ನು ತಪ್ಪುದಾರಿಗೆಳೆಯುವುದು, ಯಾವುದೇ ಅನುಮತಿಯಿಲ್ಲದ ಗ್ರೇಡ್‌ಗಳಿಗೆ ತರಗತಿಗಳನ್ನು ನಡೆಸುವುದು ಹಾಗು ಕಟ್ಟಡಗಳು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ. ಇಂತಹ ಶಾಲೆಗಳು ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಒಂದಾದ ಪ್ರಮುಖ ಸಂಸ್ಥೆಯು ನಗರದಲ್ಲಿ ಮತ್ತು ಇತರೆಡೆ ಯಾವುದೇ ಸಂಯೋಜನೆಯಿಲ್ಲದ ಅನೇಕ ಶಾಖೆಗಳನ್ನು ಹೊಂದಿದೆ. ಆದರೂ, ಅದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಇಎಸ್ಇ) ನಿಂದ ಸಂಯೋಜಿತ ಎಂದು ಹೇಳಿಕೊಳ್ಳುತ್ತದೆ.

ಮೂಲಗಳ ಪ್ರಕಾರ, ಅನಧಿಕೃತ ಶಾಲೆಗಳನ್ನು ಸರಿಪಡಿಸಲು ಸಮಯ ನೀಡಲಾಗುತ್ತದೆ. ‘ನಾವು ಮಕ್ಕಳ ಶಾಲಾ ಶಿಕ್ಷಣವನ್ನು ಅಡ್ಡಿಪಡಿಸಲು ಬಯಸುವುದಿಲ್ಲ. ಅಂತಹ ಶಾಲೆಗಳನ್ನು ಮುಚ್ಚುವುದು ಅಥವಾ ತರಗತಿಗಳನ್ನು ತಕ್ಷಣವೇ ನಿಲ್ಲಿಸುವುದು ಅರ್ಥವಲ್ಲ. ಏಕೆಂದರೆ, ಇದು ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ಸಂಬಂಧಿತ ದಾಖಲೆಗಳನ್ನು ಸಲ್ಲಿಸಲು ನಾವು ಅವರಿಗೆ ಸಮಯವನ್ನು ನೀಡುತ್ತೇವೆ. ಇದರಿಂದ ಅವರು ತರಗತಿಗಳನ್ನು ಮುಂದುವರಿಸಲು ಅವಕಾಶ ಮಾಡಿಕೊಡಲಾಗುತ್ತದೆ’ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

10 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

11 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

24 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

1 day ago