13.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಅಲ್ಲಲ್ಲಿ (ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಜಾಸ್ತಿ ಇರಬಹುದು) ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಕರಾವಳಿಯ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹಾಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ. ಆಮೇಲೆ ಕಡಿಮೆಯಾದರೂ ಎಪ್ರಿಲ್ 18ರಿಂದ ಮತ್ತೆ ಉತ್ತಮ ಮಳೆಯ ಮುನ್ಸೂಚನೆ ಇದೆ
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್ಗೆ 14 ಟನ್ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ…
ರಾಜ್ಯದಲ್ಲಿ ಕಳೆದ ವರ್ಷ 25 ಸಾವಿರಕ್ಕೂ ಅಧಿಕ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ.…