Advertisement
ಸುದ್ದಿಗಳು

Karnataka Weather | 17-04-2024 | ಮೋಡ-ಮಳೆ | ಮೋಡ ತುಂತುರು ಮಳೆ…! |

Share

18.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕೊಡಗು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಆದರೆ, ಇವತ್ತು ಈಗಾಗಲೇ ಮುಂಜಾನೆಯಿಂದ ರಾಜ್ಯದ ಅಲ್ಲಲ್ಲಿ ಬಿಳಿ ಮೋಡದ ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. ಈಗಿನಂತೆ ಎಪ್ರಿಲ್ 18 ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

12 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

18 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

19 hours ago